Select Your Language

Notifications

webdunia
webdunia
webdunia
webdunia

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿದ್ದಗಂಗಾ ಶ್ರೀ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿದ್ದಗಂಗಾ ಶ್ರೀ
ಬೆಂಗಳೂರು , ಶುಕ್ರವಾರ, 22 ಸೆಪ್ಟಂಬರ್ 2017 (11:21 IST)
ಬೆಂಗಳೂರು: ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದ ನಡೆದಾಡುವ ದೇವರು, ಸಿದ್ಧಗಂಗಾ ಶ್ರೀಗಳನ್ನು ಗುಣಮುಖರಾದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

 
ಅನಾರೋಗ್ಯ ಹಿನ್ನಲೆಯಲ್ಲಿ ಶತಾಯುಷಿ ಶ್ರೀಗಳನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಚಿಕಿತ್ಸೆಯ ನಂತರ ಇದೀಗ ಶ್ರೀಗಳನ್ನು ಬಿಡುಗಡೆ ಮಾಡಲಾಗಿದೆ.

ಇದೀಗ ಶ್ರೀಗಳ ಆರೋಗ್ಯ ಸಂಪೂರ್ಣ ಸುಧಾರಿಸಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರ ತಂಡ ಹೇಳಿದೆ. ಬಿಜಿಎಸ್ ಆಸ್ಪತ್ರೆಯ ಡಾ. ರವೀಂದ್ರ ನೇತೃತ್ವದ ವೈದ್ಯರ ತಂಡ ಶ್ರೀಗಳಿಗೆ ಚಿಕಿತ್ಸೆ ನೀಡಿತ್ತು. ಕೆಲವು ತಿಂಗಳುಗಳ ಹಿಂದೆ ಕೂಡಾ ಶ್ರೀಗಳು ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ.. ರಜನೀಕಾಂತ್ ಮತ್ತು ಕಮಲ್ ಹಾಸನ್ ರ ಈ ರಹಸ್ಯ ಔಟ್!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಯೋ ಡ್ರಾಪ್ ಸೇವಿಸಿ ಸಾವನ್ನಪ್ಪಿದ ಬಾಲಕ!