Select Your Language

Notifications

webdunia
webdunia
webdunia
webdunia

ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದ ಸಿದ್ಧಗಂಗಾ ಶ್ರೀಗಳು

ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದ ಸಿದ್ಧಗಂಗಾ ಶ್ರೀಗಳು
Bangalore , ಶುಕ್ರವಾರ, 12 ಮೇ 2017 (09:14 IST)
ಬೆಂಗಳೂರು: ಶತಾಯುಷಿ ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪ ಏರು ಪೇರಾಗಿದ್ದು, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಲಿದ್ದಾರೆ.

 
ಮಾಜಿ ಸಚಿವ ವಿ. ಸೋಮಣ್ಣ ಸ್ವಾಮೀಜಿಗಳನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆತರುತ್ತಿದ್ದಾರೆ. ನಿನ್ನೆಯಷ್ಟೇ ಸ್ವಾಮೀಜಿಗಳ ಆರೋಗ್ಯದಲ್ಲಿ ಸ್ವಲ್ಪ ಬದಲಾವಣೆಯಾಗಿತ್ತು.

ಅವರ ಆರೋಗ್ಯ ಸ್ಥಿತಿಯಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಆದರೂ, ಹೆಚ್ಚಿನ ತಪಾಸಣೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಶ್ವಾಸಕೋಶ, ಮೂತ್ರ ಮತ್ತು ಜಠರದಲ್ಲಿ ಸೋಂಕಿನ ಪರಿಣಾಮ ಸ್ವಾಮೀಜಿಗಳು ಅನಾರೋಗ್ಯಕ್ಕೀಡಾಗಿದ್ದರು.

ಈ ಹಿನ್ನಲೆಯಲ್ಲಿ ಅವರಿಗೆ 10 ಜನರ ವೈದ್ಯರ ತಂಡ ಆಶ್ರಮದಲ್ಲಿಯೇ ನಿನ್ನೆ ಚಿಕಿತ್ಸೆ ನೀಡಿತ್ತು. ಹೀಗಾಗಿ ಅವರು ಚೇತರಿಸಿಕೊಂಡಿದ್ದಾರೆ. ಹಾಗಿದ್ದರೂ ಸುರಕ್ಷತೆಗಾಗಿ ಬೆಂಗಳೂರಿನಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಪಿಯುಸಿ ಆಯ್ತು, ಇಂದು ಎಸ್ಎಸ್ಎಲ್ ಸಿ ಫಲಿತಾಂಶ