Webdunia - Bharat's app for daily news and videos

Install App

ಸಿದ್ದಾಪುರ ಮಹೇಶ್ ಬರ್ಬರ ಹತ್ಯೆ ಕೇಸ್

Webdunia
ಶುಕ್ರವಾರ, 18 ಆಗಸ್ಟ್ 2023 (17:30 IST)
ಪರಪ್ಪನ ಅಗ್ರಹಾರ ಜೈಲಿನ ಬಳಿ ನಡೆದಿದ್ದ ರೌಡಿ ಶೀಟರ್ ಮಹೇಶ್ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಕೋರ್ಟ್ಗೆ  ಶರಣಾಗಿದ್ದಾರೆ. ಕಳೆದ 15 ದಿನಗಳಿಂದ ತಲೆಮರೆಸಿಕೊಂಡಿದ್ದ ವಿಲ್ಸನ್ ಗಾರ್ಡನ್ ನಾಗ ಮತ್ತು ಡಬಲ್ ಮೀಟರ್ ಮೋಹನ್ 9ನೇ ಎಸಿಎಂಎಂ ಮುಂದೆ ಸರೆಂಡರ್ ಆಗಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ 17 ಮಂದಿ ಆರೋಪಿಗಳು ಅಂದರ್ ಆಗಿದ್ದು, ಈಗ ಪ್ರಮುಖ ಇಬ್ಬರು ಆರೋಪಿಗಳು ಕೂಡ ಪರಪ್ಪನ ಅಗ್ರಹಾರ ಠಾಣೆ ಪೊಲೀಸರಿಗೆ ಸಿಕ್ಕಿದ್ದು, ತನಿಖೆಗೆ ಚುರುಕು ಬರಲಿದೆ. 

ಕೋರ್ಟ್ ಮುಂದೆ ಶರಣಾಗಿದ್ದ ನಾಗ ಮತ್ತು ಮೋಹನ್ನನ್ನ ಮೊದಲಿಗೆ 10 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಆದರೆ ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಪೊಲೀಸರು, ಕೊಲೆ ಕೇಸ್ ಸಂಬಂಧ ಆರೋಪಿಗಳ ವಿಚಾರಣೆ ಅಗತ್ಯವಿದ್ದು ತಮ್ಮ ಕಸ್ಟಡಿಗೆ ನೀಡಬೇಕೆಂದು ಕೋರ್ಟ್ನಲ್ಲಿ ಮನವಿ ಮಾಡಿದ್ರು. ಈ ಮನವಿಯನ್ನ ಪುರಸ್ಕರಿಸಿದ ನ್ಯಾಯಾಧೀಶರು ನಾಗ ಮತ್ತು ಮೋಹನ್ನನ್ನ 7 ದಿನ ಪರಪ್ಪನ ಅಗ್ರಹಾರ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. 

ಇನ್ನು ಆರೋಪಿಗಳು ಕೋರ್ಟ್ಗೆ ಸೆರೆಂಡೆರ್ ಆಗ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ರು. ಇಬ್ಬರು ಎಸಿಪಿಗಳು ಸೇರಿದಂತೆ ಅಕ್ಕಪಕ್ಕದ ಠಾಣೆಯ ಇನ್ಸ್ಪೆಕ್ಟರ್ಗಳು, ಸಿಬ್ಬಂದಿಗಳು ಭದ್ರತೆ ಒದಗಿಸಿದ್ರು. ಕೊನೆಗೆ ಕೋರ್ಟ್ ಆದೇಶದ ಬಳಿಕ ಇಬ್ಬರು ಆರೋಪಿಗಳನ್ನ ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರ ಠಾಣೆಗೆ ಕರೆದೊಯ್ದರು. ಸದ್ಯ ಆರೋಪಿಗಳನ್ನ ವಶಕ್ಕೆ ಪಡೆದಿರೋ ಪೊಲೀಸರು ಕೊಲೆ ಕೇಸ್ ಸಂಬಂಧದ ತನಿಖೆಯನ್ನ ಮತ್ತಷ್ಟು ತೀವ್ರಗೊಳಿಸಲಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments