Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಚುನಾವಣೆ ಸೋಲಿನ ಭೀತಿ, ಹತಾಶೆ ಕಾಡುತ್ತಿದೆ: ಸಿಎಂ

ಬಿಜೆಪಿಗೆ ಚುನಾವಣೆ ಸೋಲಿನ ಭೀತಿ, ಹತಾಶೆ ಕಾಡುತ್ತಿದೆ: ಸಿಎಂ
ಮೈಸೂರು , ಸೋಮವಾರ, 30 ಅಕ್ಟೋಬರ್ 2017 (17:41 IST)
ಬಿಜೆಪಿ ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸೋಲು ಮತ್ತು ಹತಾಶೆಯ ಸಂಕೇತವಾಗಿದೆ. ತಾವು ಪ್ರಬಲ ನಾಯಕರಾಗಿ ಹೊರಹೊಮ್ಮಿದ್ದರಿಂದ ತಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.   
ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆಗೆ ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಅಧಿಕಾರರೂಢ ಪಕ್ಷವಾದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಾಯಕರ ನಡುವೆ ಆರೋಪ, ಪ್ರತ್ಯಾರೋಪಗಳ ಸುರಿಮಳೆ ಆರಂಭವಾಗಿದೆ. 
 
ಕಾಂಗ್ರೆಸ್ ಸರಕಾರ ನಾಲ್ಕು ವರ್ಷಗಳ ಅವಧಿಯಲ್ಲಿ ಪಾರದರ್ಶಕವಾಗಿ ಅಡಳಿತ ನಡೆಸಿದೆ. ರೈತಪರ, ಜನಪರ, ಶೋಷಿತರ ಪರವಾಗಿ ಕಾರ್ಯನಿರ್ವಹಿಸಿದೆ. ಸರಕಾರದ ಜನಪ್ರಿಯತೆಯನ್ನು ಸಹಿಸಿದ ಬಿಜೆಪಿ ನಮ್ಮ ವಿರುದ್ಧ ಭ್ರಷ್ಟಾಚಾರ ಸೇರಿದಂತೆ ಹಲವು ಆರೋಪಗಳನ್ನು ಮಾಡುತ್ತಿದೆ ಎಂದು ಗುಡುಗಿದ್ದಾರೆ. 
 
ಕಳೆದ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಸರಕಾರ ಈಡೇರಿಸಿದ್ದರಿಂದ ರಾಜ್ಯದ ಜನತೆ ಮತ್ತೊಮ್ಮೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿ ಎಂದು ಆಶೀರ್ವದಿಸುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

17 ವರ್ಷದ ಹದಿಹರೆಯದ ಯುವತಿಯ ಮೂವರು ಕಾಮುಕರಿಂದ ಅತ್ಯಾಚಾರ