Webdunia - Bharat's app for daily news and videos

Install App

ಸಿದ್ದರಾಮಯ್ಯ ಮಾತುಮಾತಿಗೂ ಅನ್ನಭಾಗ್ಯ ಅಂತಾರೆ : ಬೊಮ್ಮಾಯಿ

Webdunia
ಶುಕ್ರವಾರ, 22 ಅಕ್ಟೋಬರ್ 2021 (20:13 IST)
ಬೆಂಗಳೂರು  : ಉಪ ಚುನಾವಣೆ ಹಿನ್ನೆಲೆಯಲ್ಲಿ ಹಾನಗಲ್ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಮತಬೇಟೆಗೆ ಇಳಿದಿದ್ದಾರೆ.

ಬಮ್ಮನಹಳ್ಳಿ ಗ್ರಾಮದಲ್ಲಿ ಪ್ರಚಾರದಲ್ಲಿ ಮಾತನಾಡಿದ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅನ್ನಭಾಗ್ಯ, ಅನ್ನಭಾಗ್ಯ ಅಂತಾರೆ. ಸ್ವಾತಂತ್ರ್ಯ ಬಂದ್ಮೇಲೆ ಪಡಿತರದಲ್ಲಿ ಅಕ್ಕಿನೇ ಕೊಡ್ತಿರಲಿಲ್ಲವೇನೋ ಅನ್ನೋ ರೀತಿಯಲ್ಲಿ ಹೇಳ್ತಿದ್ದಾರೆ. ಅಕ್ಕಿಗೆ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಹಣ ಕೊಡ್ತಿದೆ. 29 ರುಪಾಯಿ ಕೊಟ್ಟವರನ್ನು ಬಿಟ್ಟು 3 ರುಪಾಯಿ ಕೊಟ್ಟವರ ಫೋಟೋ ಹಾಕ್ಕೊಂಡ್ರು. 30 ಕೆಜಿ ಇದ್ದಿದ್ದು 7 ಕೆಜಿ ಆಯ್ತು, ನಂತರ 3 ಕೆಜಿ ಆಯ್ತು. ಚುನಾವಣೆ ಬಂದಾಗ ಏಳು ಕೆಜಿ ಅಂದರು. ಕೇಂದ್ರ ಸರ್ಕಾರವನ್ನ ಮರೆಮಾಚಿ ಅನ್ನಭಾಗ್ಯ ಅನ್ನಭಾಗ್ಯ ಅಂದರು. ಅವರ ಯೋಜನೆಗಳು ಜನರ ಮನೆ ಬಾಗಿಲಿಗೆ ಮುಟ್ಟಲಿಲ್ಲ. 2018ರಲ್ಲಿ ಜನರು ಅವರನ್ನ ಮನೆ ಬಾಗಿಲಿಗೆ ಬರಬೇಡಿ ಅನ್ನೋ ಫಲಿತಾಂಶ ನೀಡಿದರು ಎಂದು ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments