Webdunia - Bharat's app for daily news and videos

Install App

ಹೈಕಮಾಂಡ್ ಕರೆಯದಿದ್ದರೆ ನಾನ್ಯಾಕೆ ಹೋಗ್ಲಮ್ಮಾ ದೆಹಲಿಗೆ: ಸಿದ್ದರಾಮಯ್ಯ ಫುಲ್ ಗರಂ

Krishnaveni K
ಮಂಗಳವಾರ, 10 ಫೆಬ್ರವರಿ 2026 (15:40 IST)
ಬೆಂಗಳೂರು: ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿ ಮಾಡ್ತೀರಾ ಎಂದು ಮಾಧ್ಯಮಗಳು ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯ ಗರಂ ಆಗಿ ಕರೆಯದೆ ಇದ್ದಮೇಲೆ ನಾನ್ಯಾಕಮ್ಮ ಹೋಗ್ಲಿ ಎಂದರು.
 
ಅಸ್ಸಾಂ ಚುನಾವಣೆ ತಯಾರಿ ನೆಪದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಗೆ ತೆರಳಿದ್ದಾರೆ. ಬಜೆಟ್ ಕುರಿತು ಇಂದು ಸಭೆ ಇದ್ದರೂ ಅದನ್ನು ಬಿಟ್ಟು ಅವರು ಪ್ರಿಯಾಂಕ ಗಾಂಧಿ ಕರೆದಿರುವ ಸಭೆಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಈಗ ಮತ್ತೊಮ್ಮೆ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಲ್ಲಿದೆ. ಹೀಗಾಗಿ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದಾರೆ ಎನ್ನಲಾಗುತ್ತಿದೆ. 
 
ಈ ಹಿನ್ನೆಲೆಯಲ್ಲಿ ಇಂದು ಮಾಧ್ಯಮಗಳು ಸಿಎಂ ಸಿದ್ದರಾಮಯ್ಯನವರನ್ನು ಈ ಕುರಿತು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಉತ್ತರಿಸಿದ ಅವರು ಹೌದು ಡಿಕೆಶಿ ಅವರು ನನಗೆ ಪತ್ರ ಬರೆದು ಅನುಮತಿ ಕೇಳಿದ್ರು. ಚುನಾವಣೆ ವಿಚಾರ ದೆಹಲಿಯಲ್ಲಿ ಮೀಟಿಂಗ್ ಇದೆ ಅಂದಿದ್ರು ಎಂದಿದ್ದಾರೆ. 
 
ಈ ವೇಳೆ ಮಾಧ್ಯಮ ಪ್ರತಿನಿಧಿಯೊಬ್ಬರು ನೀವು ದೆಹಲಿಗೆ ಹೋಗ್ತೀರಾ ಸಾರ್ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಗರಂ ಆಗಿ ಉತ್ತರಿಸಿದ ಸಿಎಂ ಕರೆಯದೆ ಇದ್ದಮೇಲೆ ನಾನ್ಯಾಕೆ ಹೋಗ್ಲಮ್ಮ ದೆಹಲಿಗೆ? ನನಗೆ ಇಲ್ಲಿಯೇ ಬೇಕಾದಷ್ಟು ಕೆಲಸವಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments