Webdunia - Bharat's app for daily news and videos

Install App

ಕೆಂಪಯ್ಯ ಸಲಹೆ ತಪ್ಪೇನು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ

Webdunia
ಬುಧವಾರ, 6 ಡಿಸೆಂಬರ್ 2017 (13:55 IST)
ಹುಣಸೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮೈಸೂರಿನ ಎಸ್ಪಿಗೆ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಸಲಹೆ ನೀಡಿದರೆ ತಪ್ಪೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರತಾಪಸಿಂಹ ಅವರು ರವಿ ಚೆನ್ನಣ್ಣನವರ್ ಅವರನ್ನು ಪೊಲೀಸ್ ಇಲಾಖೆಗೋ ಅಥವಾ ಕೆಂಪಯ್ಯಗೆ ನಿಷ್ಠರೋ ಎಂದು ಮಂಗಳವಾರ ಕೇಳಿದ್ದರು. ಇದಕ್ಕೆ ಉತ್ತರವೆಂಬಂತೆ ಮುಖ್ಯಮಂತ್ರಿ ಮಾಧ್ಯಮಗಳೊಂದಿಗೆ ಮಾತನಾಡಿ, ಎಸ್ಪಿ ರವಿ ಚೆನ್ನಣ್ಣನವರ್ ಜೊತೆಗೆ ಗೃಹ ಸಚಿವರ ಸಲಹೆಗಾರ ಮಾತನಾಡಿದರೆ ತಪ್ಪೇನು ಎಂದು ಕೇಳಿದ್ದಾರೆ.

ಹನುಮ ಜಯಂತಿ ಮೆರವಣಿಗೆಗೆ ಕಳೆದ ವರ್ಷದಂತೆ ಪೊಲೀಸರು ಮಾರ್ಗ ನಿಗದಿ ಮಾಡಿದ್ದರು. ಆದರೆ, ಅದನ್ನು ಬಿಟ್ಟು ಬೇರೆ ಮಾರ್ಗದಲ್ಲಿ ಸಾಗಬೇಕು ಎಂಬ ಪ್ರತಿಷ್ಠೆ ಏಕೆ? ಪೊಲೀಸರ ಕಾನೂನು ಪ್ರಕಾರ ಕಾರ್ಯನಿರ್ವಹಿಸಿದ್ದಾರೆ. ಕೆಂಪಯ್ಯಗೆ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಪ್ರತಾಪಸಿಂಹ ಅವರಿಗೆ ಇನ್ನೂ ರಾಜಕೀಯ ಪ್ರಬುದ್ಧತೆ ಬಂದಿಲ್ಲ. ಸಂಸದನಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡುವುದು ಬಿಟ್ಟು ಶಾಂತಿ ಕದಡಬಾರದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments