ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

Krishnaveni K
ಮಂಗಳವಾರ, 9 ಡಿಸೆಂಬರ್ 2025 (17:07 IST)
ಬೆಂಗಳೂರು: ಕೇಂದ್ರ ವಿತ್ತ ಸಚಿವಾಲಯ ಸಾಲ ವಜಾ ಮಾಡಿರುವ ಮೊತ್ತವನ್ನು ಬಹಿರಂಗಪಡಿಸಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದು ಇದರಲ್ಲಿ ಮೋದಿ ಪಾಲು ಎಷ್ಟಿದೆ ಎಂದಿದ್ದಾರೆ.

‘ಕೇಂದ್ರ ಹಣಕಾಸು ಸಚಿವಾಲಯವು ಬಹಿರಂಗಪಡಿಸಿರುವ ಅಂಕಿ-ಅಂಶ ಆಘಾತಕಾರಿ ಮಾತ್ರವಲ್ಲ, ಸ್ಪಷ್ಟವಾಗಿ ಜನವಿರೋಧಿಯಾಗಿದೆ. ಕೇವಲ ಕಳೆದ ಐದು ವರ್ಷಗಳಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು ₹6,15,647 ಕೋಟಿ ಸಾಲವನ್ನು ವಜಾ (write off) ಮಾಡಿದೆ — ವರ್ಷಕ್ಕೆ ಸರಾಸರಿ ₹1,23,129 ಕೋಟಿ..!!

ಒಂದು ವರ್ಷದ ಅವಧಿಯಲ್ಲಿ ವಜಾ ಮಾಡಿರುವ ಬ್ಯಾಂಕ್ ಸಾಲದ ಮೊತ್ತವು ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಜೀವನ ಮಟ್ಟ ಸುಧಾರಣೆಗಾಗಿ ನೇರವಾಗಿ ಅವರಿಗೆ ನೀಡಲಾಗುತ್ತಿರುವ ಕರ್ನಾಟಕದ ಗ್ಯಾರಂಟಿ ಯೋಜನೆಗಳ ವಾರ್ಷಿಕ ವೆಚ್ಚಕ್ಕಿಂತ ದುಪ್ಪಟ್ಟಾಗಿದೆ.

ನಾವು ಜನಸಾಮಾನ್ಯರ ಪರ ಎಂದು ಬೊಗಳೆ ಬಿಡುವ ಬಿಜೆಪಿ ಸದ್ದಿಲ್ಲದಂತೆ ಶ್ರೀಮಂತ ಉದ್ಯಮಿಗಳ ಸಾಲವನ್ನು  ವಜಾ ಮಾಡಿ, ಅವರ ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳನ್ನು ಬೆಂಬಲಿಸುತ್ತಿದೆ. ಇದು ಬೆವರು-ರಕ್ತ ಹರಿಸಿ ಸಂಪಾದಿಸಿದ ಗಳಿಕೆಯಲ್ಲಿ ತೆರಿಗೆ ನೀಡುತ್ತಿರುವ ಭಾರತೀಯರಿಗೆ ಬಗೆಯುತ್ತಿರುವ ದ್ರೋಹವಾಗಿದೆ.

ವಜಾ ಮಾಡಿದ ಸಾಲದ ಮೊತ್ತದಲ್ಲಿ ಎಷ್ಟು ಪಾಲು ಪ್ರಧಾನಿ ನರೇಂದ್ರ ಮೋದಿ ಅವರ ಅತ್ಯಂತ ನಿಕಟ ಸ್ನೇಹಿತರ ಕಂಪನಿಗಳಿಗೆ ಸೇರಿದೆ? ಚುನಾವಣಾ ಬಾಂಡ್ ಮೂಲಕ ಬಿಜೆಪಿಗೆ ಉದಾರವಾಗಿ ದೇಣಿಗೆ ನೀಡಿದವರ ಎಷ್ಟು ಕೋಟಿ ಸಾಲ ವಜಾ ಆಗಿದೆ?

2014–2020ರ ಅವಧಿಯಲ್ಲಿ ವಜಾ ಮಾಡಲಾದ ಸಾಲದ ಮೊತ್ತದಲ್ಲಿ ಎಷ್ಟು ಹಣ ನಿಜವಾಗಿ ವಸೂಲಾಗಿದೆ? ಸನ್ಮಾನ್ಯ‌ ಪ್ರಧಾನಿಗಳೇ ಈ ಪ್ರಶ್ನೆಗಳಿಗೆ ಉತ್ತರಿಸುವಿರಾ?

ಬಡತನ ನಿರ್ಮೂಲನೆಯ ಕಲ್ಯಾಣ ಯೋಜನೆಗಳನ್ನು ಸದಾಕಾಲ ದೂಷಿಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಭ್ರಷ್ಟ ಕಾರ್ಪೊರೇಟ್ ಧಣಿಗಳನ್ನು ಆರ್ಥಿಕ ಸಂಕಷ್ಟದಿಂದ ಪಾರುಮಾಡಲು ಸಾರ್ವಜನಿಕ ಹಣವನ್ನು ಯಾಕೆ ದುರ್ಬಳಕೆ ಮಾಡುತ್ತಿದೆ ಎನ್ನುವ ಪ್ರಶ್ನೆಗೆ ಉತ್ತರ ನೀಡುವುದೇ?

ಇದನ್ನು ದಕ್ಷ ಹಣಕಾಸು ನಿರ್ವಹಣೆ ಎನ್ನಲಾಗದು, ಇದು ಜನಸಾಮಾನ್ಯರ ತೆರಿಗೆ ಹಣವನ್ನು  ಭ್ರಷ್ಟ ಉದ್ಯಮಿ ಮಿತ್ರರಿಗೆ ಧಾರೆ ಎರೆದು ತಮ್ಮ ರಾಜಕೀಯ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳುವ ''ಹೊಸ  ಮೋದಿ‌ಎಕಾನಮಿಕ್ಸ್" ಎನ್ನಬಹುದು ಅಷ್ಟೆ’ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಆದಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ಜಿ ಪರಮೇಶ್ವರ್ ಸೂಕ್ತ: ಕೆಎನ್ ರಾಜಣ್ಣ

ಇಂಧನ ದರ ಏರಿಕೆ ಬಿಸಿ ಬೆನ್ನಲ್ಲೇ ಗ್ರಾಹಕರಿಗೆ ಅಕ್ಕಿ ಬೆಲೆಯಲ್ಲಿ ಬಿಗ್ ಶಾಕ್

ಪ್ರಧಾನಿ ನರೇಂದ್ರ ಮೋದಿಗೆ ನಾರ್ವೇಯ ಅತ್ಯುನ್ನತ ನಾಗರಿಕ ಗೌರವ

ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡುವುದು ಕೈ ನಾಯಕರ ಗುರಿ: ರೇವಂತ್ ರೆಡ್ಡಿ

ಜೆಡಿಎಸ್‌ ಬಿಜೆಪಿ ಸಂಬಂಧ ತುಂಬಾ ಚೆನ್ನಾಗಿದೆ: ಎಚ್ ಡಿ ದೇವೇಗೌಡ

ಮುಂದಿನ ಸುದ್ದಿ
Show comments