ಮುಡಾ ಸೊಳ್ಳೆಯಿಂದ ಕಚ್ಚಿಸಿಕೊಂಡ ಸಿದ್ದರಾಮಯ್ಯಗೆ ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ: ಅಶ್ವತ್ಥನಾರಾಯನ್

Sampriya
ಮಂಗಳವಾರ, 9 ಜುಲೈ 2024 (14:46 IST)
Photo Courtesy X
ಬೆಂಗಳೂರು: ನಗರ ಸೇರಿದಂತೆ ರಾಜ್ಯದಾದ್ಯಂತ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಮಾತ್ರ ಮುಡಾ ಸೊಳ್ಳೆಯಿಂದ ಕಚ್ಚಿಸಿಕೊಂಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌ ಅಶ್ವತ್ಥನಾರಾಯನ್ ಅವರು ಲೇವಾಡಿ ಮಾಡಿದರು.

ಅವರು ಇಂದು ಡೆಂಗ್ಯೂ ಹರಡುವಿಕೆ ಕುರಿತು ಪರಿಶೀಲಿಸಲು ಓಕಳಿಪುರಂ ಚರ್ಚ್ ಬಳಿ ಇರುವ ಕೊಳೆಗೇರಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಮಾಧ್ಯಮದ ಜತೆ ಮಾತನಾಡಿದರು.

ಡೆಂಗ್ಯೂ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಮತ್ತು ಬಿಬಿಎಂಪಿ ನಿರ್ಲಕ್ಷ್ಯ ವಹಿಸಿದ್ದು, ಸಿಎಂ ಮಾತ್ರ ಮುಡಾ ಸೊಳ್ಳೆ ಕಚ್ಚಿಸಿಕೊಂಡಿದ್ದಾರೆ. ಇದರ ಜತೆಗೆ ಅವರಿಗೆ ವಾಲ್ಮೀಕಿ ನಿಗಮದ ಹಗರಣ ಭಾಧಿಸುತ್ತಿದ್ದು, ಡೆಂಗ್ಯೂ ಸೊಳ್ಳೆ ಯಾರಿಗೆ ಕಚ್ಚಿದರೆ ನನಗೇನು ಎಂಬ ರೀತಿಯಲ್ಲಿ ಅವರು ವರ್ತಿಸುತ್ತಿದ್ದಾರೆ ಎಂದು ದೂರಿದರು.

ಅನುಭವವುಳ್ಳ ಸಿಎಂ ಸಿದ್ದರಾಮಯ್ಯ ಅವರು ಇದುವರೆಗೂ ಈ ಸಂಬಂಧ ಒಂದು ಸಭೆಯನ್ನು ಕರೆದಿಲ್ಲ. ಅವರನ್ನು ಬಾಧಿಸುತ್ತಿದೆ. ಡೆಂಗ್ಯೂ ಸೊಳ್ಳೆ ಯಾರಿಗೆ ಕಚ್ಚಿದರೆ ನನಗೇನು ಎಂಬ ರೀತಿಯಲ್ಲಿ ಅವರು ಇವತ್ತು ವರ್ತಿಸುತ್ತಿದ್ದಾರೆ. ಇಷ್ಟು ಅನುಭವವಿರುವ ಸಿಎಂ ಒಂದು ಸಭೆ ಮಾಡಿದ್ದಾರಾ, ಡೆಂಗ್ಯೂ ಪ್ರಕರಣಗಳು ತೀವ್ರವಾಗಿ ಹೆಚ್ಚಾಗುತ್ತಿವೆ. ಸೊಳ್ಳೆ ನಿಯಂತ್ರಣಕ್ಕೆ ಗಮನ ಕೊಡುತ್ತಿಲ್ಲ. ಎಲ್ಲೆಡೆ ಡೆಂಗ್ಯೂ, ಚಿಕೂನ್‍ಗುನ್ಯ ಸೊಳ್ಳೆಗಳು ಮಾರಕವಾಗಿವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments