ಸಿದ್ದರಾಮಯ್ಯ ಸಿಎಂ ಆಗೋಕೆ ಸಾಧ್ಯ ಇಲ್ಲಾ!

Webdunia
ಶುಕ್ರವಾರ, 10 ಮೇ 2019 (17:39 IST)
ಸಿದ್ದರಾಮಯ್ಯ ಸಿಎಂ ಆಗೋಕೆ ಸಾಧ್ಯನೇ ಇಲ್ಲ. ಹೀಗಂತ ತಂದೆ ವಿಶ್ವನಾಥ್ ರಂತೆ ಸಿದ್ದು ವಿರುದ್ಧ ಗುಡುಗಿದ್ದಾರೆ ಅಮಿತ್ ದೇವರಹಟ್ಟಿ.  

ನಮ್ಮ ತಂದೆ ಮೇಲೆ ಸಿದ್ದರಾಮಯ್ಯಗೆ  ಇನ್ನೂ ಕೂಡಾ ಸಿಟ್ಟು, ಕೋಪವಿದೆ. ಈಗಾಗಿಯೇ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಕಡೆಗಣಿಸಿ ದೂರವಿರಿಸಿದ್ದಾರೆ. ಈ ಅವಧಿಯಲ್ಲಿ ಸಿಎಂ ಆಗೋಕೆ ಸಿದ್ದರಾಮಯ್ಯಗೆ ಸಾಧ್ಯವಿಲ್ಲ ಎಂದಿದ್ದಾರೆ.
ಈ ವಯಸ್ಸಿನಲ್ಲೂ ನಮ್ಮ ತಂದೆಯ ಮನಸ್ಸು ನೋಯಿಸಿರುವುದು ನನಗೆ ವೈಯಕ್ತಿಕವಾಗಿ ಬೇಸರವಾಗಿದೆ. ಜಿ.ಟಿ.ದೇವೇಗೌಡರ ಜೊತೆ ಅವರು ಯಾವ ರೀತಿ ಹೊಂದಿಕೊಂಡರೋ ಹಾಗೇ ನಮ್ಮ ತಂದೆಯವರ ಜೊತೆನೂ ಹೊಂದಿಕೊಂಡು ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳಬೇಕಿತ್ತು.

36 ಸಾವಿರ ಮತಗಳಿಂದ ಸೋಲಿಸಿದ ಸಚಿವ ಜಿಟಿಡಿ ಜೊತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಳ್ತಾರೆ. ಆದ್ರೆ ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ಕರೆದುಕೊಂಡು ಬಂದು ಸಿಎಂ ಮಾಡುವರೆಗೂ ಜೊತೆಗಿದ್ದ ನಮ್ಮ ತಂದೆಯನ್ನ ಕಡೆಗಣಿಸಿರೋದು ಎಷ್ಟು ಸರಿ? ಎಂದು ಸಿದ್ದುಗೆ ಪ್ರಶ್ನೆ ಹಾಕಿದ್ದಾರೆ ಅಮಿತ್.

ಹುಣಸೂರಿನ ಜನರು ಕೂಡ ಸಿದ್ದು - ವಿಶ್ವನಾಥ್ ವೇದಿಕೆ ಹಂಚಿಕೊಳ್ತಾರೇ ಅನ್ನೋದನ್ನ ನಿರೀಕ್ಷೆ ಮಾಡಿದ್ದರು.
ಆದ್ರೆ, ಸಿದ್ದರಾಮಯ್ಯ ನವರು ಏಕೆ ವೇದಿಕೆ ಹಂಚಿಕೊಳ್ಳಲಿಲ್ಲ ಎಂದು ಸಿದ್ದು ವಿರುದ್ಧ ಕಿಡಿಕಾರಿದ್ದಾರೆ ಅಮಿತ್.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 7 ಸ್ಥಾನ ಯಾರಿಗೆ

ಅಮೆರಿಕಾ, ಇರಾನ್ ನಡುವೆ ಕೊನೆಗೂ ಶಾಂತಿ ಒಪ್ಪಂದಕ್ಕೆ ಸಹಿ: ಒಪ್ಪಂದದ ಪ್ರಮುಖ ಅಂಶಗಳ ವಿವರ ಇಲ್ಲಿದೆ

ವಾಟ್ಸಾಪ್, ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಪ್ಲಸ್ ಎಂದರೇನು: ಭಾರತದಲ್ಲಿ ಎಷ್ಟು ದರವಿದೆ ಇಲ್ಲಿದೆ ವಿವರ

Karnataka Weather: ಕರ್ನಾಟಕದಲ್ಲಿ ಮುಂಗಾರು ಕ್ಷೀಣವಾಗಿದ್ದರೂ ಈ ಭಾಗದಲ್ಲಿ ಇಂದೂ ಮಳೆ

ಬಂಡೆ ಒಡೆಯೋರಿಗೆ ರೈತರ ಕಷ್ಟ ತಿಳಿಯಲ್ಲ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments