Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಟೆಂಪಲ್ ರನ್ ನಲ್ಲಿರುವಾಗ ಸದನದಲ್ಲಿ ಸಿಎಂ ಹುದ್ದೆ ಬಗ್ಗೆ ಸಿದ್ದರಾಮಯ್ಯ ಶಾಕಿಂಗ್ ಘೋಷಣೆ

Krishnaveni K
ಶುಕ್ರವಾರ, 19 ಡಿಸೆಂಬರ್ 2025 (13:16 IST)
ಬೆಳಗಾವಿ: ಒಂದೆಡೆ ಡಿಕೆ ಶಿವಕುಮಾರ್ ಟೆಂಪಲ್ ರನ್ ನಡೆಸಿದ್ದರೆ ಇತ್ತ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಸಿಎಂ ಬದಲಾವಣೆ ಬಗ್ಗೆ ಶಾಕಿಂಗ್ ಘೋಷಣೆಯೊಂದನ್ನು ಮಾಡಿದ್ದಾರೆ.

ರಾಜ್ಯದಲ್ಲಿ ಸಿಎಂ ಕುರ್ಚಿ ಕಾಳಗ ತಾರಕಕ್ಕೇರಿರುವಾಗಲೇ ಇತ್ತ ಸಿದ್ದರಾಮಯ್ಯ ಇಂದು ಸದನದಲ್ಲೇ ಐದು ವರ್ಷವೂ ನಾನೇ ಸಿಎಂ ಎಂದು ಘೋಷಣೆ ಮಾಡಿದ್ದಾರೆ. ವಿಪಕ್ಷ ಶಾಸಕ ಸುನಿಲ್ ಕುಮಾರ್ ನೀವೇ ಇರುತ್ತೀರಾ ಇಲ್ವಾ ಎಂದು ಸ್ಪಷ್ಟನೆ ಕೇಳಿದಾಗ ಕೆರಳಿದ ಸಿದ್ದರಾಮಯ್ಯ ಐದೂ ವರ್ಷವೂ ನಾನೇ ಸಿಎಂ ಎಂದಿದ್ದಾರೆ.

ಮೊನ್ನೆಯವರೆಗೂ ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಈಗ ದಿಡೀರ್ ವರಸೆ ಬದಲಿಸಿದ್ದಾರೆ. ಈ ಮೂಲಕ ತಾನು ಕುರ್ಚಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಡಿಕೆ ಶಿವಕುಮಾರ್ ಬಣಕ್ಕೆ ಸಂದೇಶ ರವಾನಿಸಿದ್ದಾರೆ.

ಇನ್ನೊಂದೆಡೆ ಡಿಕೆಶಿ ಇಷ್ಟಾರ್ಧ ಸಿದ್ಧಿಗಾಗಿ ಅಂಕೋಲದ ಶಕ್ತಿದೇವತೆ ದರ್ಶನ ಮಾಡಿ ಪೂಜೆ ಮಾಡಿಸಿದ್ದಾರೆ. ಅವರ ಸಂಕಲ್ಪವೇನೆಂದು ರಹಸ್ಯವಾಗಿಯೇ ಇಡಲಾಗಿದೆ. ಇತ್ತ ಡಿಕೆಶಿ ಟೆಂಪಲ್ ರನ್ ನಲ್ಲಿರುವಾಗಲೇ ಸಿದ್ದರಾಮಯ್ಯ ಕುರ್ಚಿ ಬಿಟ್ಟುಕೊಡಲ್ಲ ಎಂದು ಘೋಷಿಸಿದ್ದು ಮುಂದೆ ಕಾಂಗ್ರೆಸ್ ನಲ್ಲಿ ಯಾವ ರೀತಿಯ ಬೆಳವಣಿಗೆಯಾಗಲಿದೆ ಎಂಬ ಕುತೂಹಲಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments