Webdunia - Bharat's app for daily news and videos

Install App

ಸಿದ್ದರಾಮಯ್ಯನವರನ್ನು ಯಾವುದೇ ಕಾರಣಕ್ಕೂ ಕಿತ್ತಾಕ್ಬೇಡಿ ಪ್ಲೀಸ್: ಎಲ್ಲಾ ಸಿದ್ದುಗಾಗಿ

Krishnaveni K
ಬುಧವಾರ, 21 ಆಗಸ್ಟ್ 2024 (10:55 IST)
ಬೆಂಗಳೂರು: ಸಿದ್ದರಾಮಯ್ಯ ಮೇಲೆ ಮುಡಾ ಹಗರಣದ ವಿಚಾರವಾಗಿ ರಾಜ್ಯಪಾಲರು ತನಿಖೆಗೆ ಆದೇಶಿಸುತ್ತಿದ್ದಂತೇ ಇತ್ತ ಅವರ ಆಪ್ತ ಬಳಗದಲ್ಲಿ ತಳಮಳ ಶುರುವಾಗಿದೆ. ಸಿದ್ದರಾಮಯ್ಯ ಪರವಾಗಿ ಈಗ ಹೈಕಮಾಂಡ್ ಮುಂದೆ ಲಾಬಿ ನಡೆಸಲು ಮುಂದಾಗಿದ್ದಾರೆ.

ಮುಡಾ ಹಗರಣ ವಿಚಾರವಾಗಿ ಹೈಕಮಾಂಡ್ ಸಿದ್ದರಾಮಯ್ಯರಿಂದ ಅಂತರ ಕಾಯ್ದುಕೊಂಡಿದೆ. ಈ ನಡುವೆ ದೆಹಲಿಯಲ್ಲಿ ಡಿಕೆ ಶಿವಕುಮಾರ್ ಮಾತುಕತೆಯನ್ನೂ ನಡೆಸಿದ್ದಾರೆ. ಇದೆಲ್ಲದರ ನಡುವೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿದರೆ ಎಂಬ ತಲ್ಲಣ ಸಿದ್ದು ಆಪ್ತರಿಗೆ ಶುರುವಾಗಿದೆ.

ಈ ಕಾರಣಕ್ಕೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕಿತ್ತು ಹಾಕಬೇಡಿ ಎಂದು ಅವರ ಪರವಾಗಿ ವಾದ ಮಂಡಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯರನ್ನು ಯಾಕೆ ಕಿತ್ತು ಹಾಕಬಾರದು ಎಂದು ಅವರ ಪರ ಆಪ್ತರು ಹೈಕಮಾಂಡ್ ಗೆ ಮನದಟ್ಟು ಮಾಡಲಿದ್ದಾರೆ.

ಸಿದ್ದರಾಮಯ್ಯ ಪರ ಹೈಕಮಾಂಡ್ ನಿಲ್ಲಬೇಕು. ಅವರು ಯಾವುದೇ ಅಕ್ರಮವೆಸಗಿಲ್ಲ. ಇದೆಲ್ಲಾ ಬಿಜೆಪಿ ಪಿತೂರಿ ಎಂದು ಹೈಕಮಾಂಡ್ ಗೆ ಮನದಟ್ಟು ಮಾಡಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯರನ್ನು ಕೆಳಗಿಳಿಸಿದರೆ ಸರ್ಕಾರಕ್ಕೇ ಸಂಚಕಾರ ಬರಬಹುದು ಎಂದು ವಾದಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments