Select Your Language

Notifications

webdunia
webdunia
webdunia
webdunia

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಸಿಎಂ ಸಿದ್ದರಾಮಯ್ಯ

Sampriya

ಬೆಂಗಳೂರು , ಭಾನುವಾರ, 29 ಜೂನ್ 2025 (14:01 IST)
Photo Credit X
ಬೆಂಗಳೂರು: ‘ಸೆಪ್ಟೆಂಬರ್ ನಂತರ ಕ್ರಾಂತಿ ಆಗಲಿದೆ’ ಎಂಬ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ‌

ಮುಖ್ಯಮಂತ್ರಿ ಬದಲಾವಣೆಯ ವದಂತಿ ಬಗ್ಗೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ತಿನ ಸದಸ್ಯ ಡಾ. ಯತೀಂದ್ರ, ‘ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಮತ್ತು ಶಾಸಕರ ಬೆಂಬಲವಿದೆ. ಯಾವುದೇ ಬದಲಾವಣೆಯ ಸೂಚನೆ ಹೈಕಮಾಂಡ್‌ನಿಂದ ಬಂದಿಲ್ಲ’ ಎಂದು ಹೇಳಿದರು.


ಕೆಲವು ಗುಂಪುಗಳು ಮುಖ್ಯಮಂತ್ರಿ ಬದಲಾಗಬೇಕೆಂಬ ಆಕಾಂಕ್ಷೆಯನ್ನು ಹೊಂದಿವೆ. ಹೀಗಾಗಿ, ಕೆಲವರು ಊಹಾಪೋಹಗಳನ್ನು ಹರಡುತ್ತಲೇ ಇದ್ದಾರೆ. ಆ ಗುಂಪು ಯಾವುದು ಎನ್ನುವುದು ನನಗೆ ಗೊತ್ತಿಲ್ಲ ಎಂದರು. 

ರಾಜ್ಯ ಸರ್ಕಾರ ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆಯುತ್ತಿದೆ. ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್ ಯಾವುದೇ ಸೂಚನೆಯನ್ನು ಕೊಟ್ಟಿಲ್ಲ. ಹೀಗಾಗಿ, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ