Webdunia - Bharat's app for daily news and videos

Install App

ಅತೃಪ್ತ ಮನಸ್ಸುಗಳ ಶಮನಕ್ಕೆ ಮುಂದಾದ ಸಿದ್ದರಾಮಯ್ಯ

Webdunia
ಮಂಗಳವಾರ, 25 ಅಕ್ಟೋಬರ್ 2016 (09:49 IST)
ಬೆಂಗಳೂರು: ಅಂತೂ ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯ ಐದು ವರ್ಷದ ಕೊನೆ ಘಳಿಗೆಯಲ್ಲಿ ಶಾಸಕರನ್ನು ಹಾಗೂ ಕೆಲವು ಕಾರ್ಯಕರ್ತರನ್ನು ನಿಗಮ ಹಾಗೂ ಮಂಡಳಿಗಳಿಗೆ ನೇಮಕ ಮಾಡುವ ಮೂಲಕ ಅತೃಪ್ತ ಮನಸ್ಸುಗಳನ್ನು ಸರಿ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.
 
ಖಾಲಿ ಇರುವ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನಕ್ಕೆ 10 ರಿಂದ 15 ಶಾಕರನ್ನು, ನಾಲ್ವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆಯಿದ್ದು, ನಿನ್ನೆಯಷ್ಟೇ ದೆಹಲಿಗೆ ತೆರಳಿ ರಾಹುಲ್ ಗಾಂಧಿಯವರ ಒಪ್ಪಿಗೆ ಪಡೆದುಕೊಂಡು ಬಂದಿದ್ದಾರೆ. ಆರೇಳು ತಿಂಗಳುಗಳಿಂದ ಖಾಲಿಯಿದ್ದ ಸ್ಥಾನಗಳಿಗೆ ದೀಪಾವಳಿ ಹಬ್ಬದೊಳಗೆ ನಾಮನಿರ್ದೇಶನವಾಗಲಿದೆ. 2018ರ ವಿಧಾನ ಸಭಾ ಚುನಾವಣೆ ದೃಷ್ಟಿಯಲ್ಲಿ ಇದು ಕಾಂಗ್ರೆಸ್‌ಗೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆಯಿದೆ.
 
ಸಚಿವ ಸ್ಥಾನ ದೊರೆಯದ್ದರಿಂದ ಅಸಮಾಧಾನ ಹೊಂದಿರುವ ಶಾಸಕರನ್ನೂ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿ ಅವರನ್ನು ಸಮಾಧಾನ ಪಡಿಸಿ, ಚುನಾವಣೆಗೆ ಅಣಿಗೊಳಿಸುವ ತಂತ್ರ ಸಿದ್ದರಾಮಯ್ಯನವರದ್ದು. ಅಧ್ಯಕ್ಷ ಸ್ಥಾನಕ್ಕೆ ನೇಮಕಗೊಳಿಸಲು ಸಿದ್ಧಪಡಿಸಿದ್ದ ಸಂಭವನೀಯರ ಪಟ್ಟಿಗೆ ಹೈಕಮಾಂಡ್ ಅಸ್ತು ಎಂದಿದೆ. ನೇಮಕಗೊಳ್ಳದ ಅನೇಕ ಆಕಾಂಕ್ಷಿಗಳಿಗೆ ಅಸಮಾಧಾನ ಆಗುವ ಸಾಧ್ಯತೆ ಇರುವುದರಿಂದ ಪಟ್ಟಿಯನ್ನು ಇನ್ನೂ ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ. ದೀಪಾವಳಿ ಮುನ್ನ ಸಂಬಂಧಿಸಿದ ಶಾಸಕ, ಕಾರ್ಯಕರ್ತರಿಗೆ ವೈಯಕ್ತಿಕವಾಗಿ ಆದೇಶ ಪತ್ರ ನೀಡುವ ಚಿಂತನೆ ರಾಜ್ಯ ಕಾಂಗ್ರೆಸ್ ಪಕ್ಷದ್ದು ಎನ್ನಲಾಗಿದೆ.
 
ಸಂಭವನೀಯರ ಶಾಸಕರ ಪಟ್ಟಿ
ಮಾಲಿಕಯ್ಯ ಗುತ್ತೇದಾರ, ಶಿವಾನಂದ ಪಾಟೀಲ, ಎಂ.ಟಿ.ಬಿ. ನಾಗರಾಜ್, ಸಿ.ಪಿ. ಯೋಗೇಶ್ವರ, ಆರ್.ವಿ. ದೇವರಾಜ್, ರಾಜು ಆಲಗೂರು, ಡಿ.ಜೆ. ಶಾಂತನಗೌಡ, ರಾಜಾ ವೆಂಕಟಪ್ಪನಾಯಕ, ಜೆ.ಎಸ್. ಪಾಟೀಲ, ಬಿ.ಆರ್. ಯಾವಗಲ್, ಫೀರೋಜ್ ಶೇಠ್, ರಹೀಂಖಾನ್, ಕೆ. ವೆಂಕಟೇಶ, ಎಂ.ಪಿ. ನರೇಂದ್ರಸ್ವಾಮಿ, ವಸಂತ ಬಂಗೇರ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments