Webdunia - Bharat's app for daily news and videos

Install App

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Krishnaveni K
ಬುಧವಾರ, 26 ನವೆಂಬರ್ 2025 (08:33 IST)
ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿರುವ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು ಸಿಗಲಿದೆ. ಇಂದು ರಾಜ್ಯ ರಾಜಕೀಯದ ಕುರ್ಚಿ ಕದನಕ್ಕೆ ಕ್ಲೈಮ್ಯಾಕ್ಸ್ ಸಿಗುವ ಸಾಧ್ಯತೆಯಿದೆ.

ಸಿಎಂ ಪಟ್ಟಕ್ಕಾಗಿ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದು ಹೈಕಮಾಂಡ್ ಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಈ ನಡುವೆ ಇಂದು ರಾಜ್ಯದ ನಾಯಕರ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ತೆರಳಿರುವ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಈಗಾಗಲೇ ರಾಹುಲ್ ರಾಜ್ಯದ ಹಿರಿಯ ನಾಯಕ ಬಿಕೆ ಹರಿಪ್ರಸಾದ್, ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಕರೆಸಿಕೊಂಡು ಮಾಹಿತಿ ಪಡೆದುಕೊಂಡಿದ್ದಾರೆ. ಇದೀಗ ಖರ್ಗೆ-ರಾಹುಲ್ ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆಯಿದೆ. ಈ ವೇಳೆ ಸಿಎಂ ಪಟ್ಟದ ಬಗ್ಗೆ ರಾಹುಲ್ ಪ್ರಮುಖ ತೀರ್ಮಾನ ಕೈಗೊಳ್ಳಬಹುದು.

ಮೂಲಗಳ ಪ್ರಕಾರ ನವಂಬರ್ 29 ರಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡುವೆ ಸಂಧಾನ ಸಭೆ ನಡೆಯಲಿದೆ. ಇದಕ್ಕೆ ಸ್ವತಃ ರಾಹುಲ್ ಗಾಂಧಿ ನೇತೃತ್ವ ವಹಿಸಲಿದ್ದಾರೆ. ಈ ಕಾರಣಕ್ಕೆ ಇಬ್ಬರೂ ನಾಯಕರು ದೆಹಲಿಗೆ ತೆರಳುವ ಸಾಧ್ಯತೆಯಿದೆ. ಈ ಮೂಲಕ ಕುರ್ಚಿ ಕದನದ ಗೊಂದಲಗಳಿಗೆ ರಾಹುಲ್ ಗಾಂಧಿ ಸಮ್ಮುಖದಲ್ಲಿಯೇ ತೆರೆ ಎಳೆಯುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments