ಸಿಎಂ ಕುರ್ಚಿ ಬಗ್ಗೆ ಕೇಳಿದ್ದಕ್ಕೆ ಗರಂ ಆದ ಸಿದ್ದರಾಮಯ್ಯ

Krishnaveni K
ಶುಕ್ರವಾರ, 26 ಡಿಸೆಂಬರ್ 2025 (16:14 IST)
ಬೆಂಗಳೂರು: ಸಿಎಂ ಕುರ್ಚಿ ಕುಸ್ತಿ ಬಗ್ಗೆ ಕೇಳಿದ್ದಕ್ಕೆ ಸಿದ್ದರಾಮಯ್ಯ ಮಾಧ್ಯಮಗಳ ಮೇಲೆ ಗರಂ ಆದ ಘಟನೆ ಇಂದು ನಡೆದಿದೆ. ಮಾಧ್ಯಮ ಪ್ರತಿನಿಧಿ ಮೇಲೆ ಅವರು ಈ ವೇಳೆ ರೇಗಾಡಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಕಾರ್ಯಕಾರಿಣಿ ಸಭೆಯಲ್ಲಿ ಹಾಜರಾಗಲು ದೆಹಲಿಗೆ ಕರೆದಿರುವ ಕಾಂಗ್ರೆಸ್ ಹೈಕಮಾಂಡ್ ಈ ವೇಳೆ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸುವ ಸಾಧ್ಯತೆಯಿದೆ. ಇದರಿಂದ ರಾಜ್ಯದಲ್ಲಿ ಮತ್ತೆ ಕುರ್ಚಿ ಕದನ ತಾರಕಕ್ಕೇರಿದೆ.

ಇದರ ಬಗ್ಗೆ ಇಂದು ಮಾಧ್ಯಮಗಳು ಸಿಎಂ ಸಿದ್ದರಾಮಯ್ಯನವರನ್ನು ಪ್ರಶ್ನೆ ಮಾಡಿವೆ. ‘ಕರ್ನಾಟಕದಲ್ಲಿ ಯಾವಾಗಲೂ ಬರೀ ಸಿಎಂ ಕುರ್ಚಿಯದ್ದೇ ಚರ್ಚೆಯಾಗುತ್ತಿದೆ. ಇದಕ್ಕೆ ಮುಕ್ತಿಯಿಲ್ಲವೇ’ ಎಂದು ಮಾಧ್ಯಮ ಪ್ರತಿನಿಧಿಯೊಬ್ಬರು ಕೇಳಿದಾಗ ಸಿಎಂ ಗರಂ ಆದರು.

‘ನಿಮಗೆ ದಿನ ಬೆಳಗಾದರೆ ಸಿಎಂ ಕುರ್ಚಿ ಬಿಟ್ಟು ಬೇರೆ ಸುದ್ದಿ ಇಲ್ವಾ?’ ಎಂದು ಗರಂ ಆಗಿ ಪ್ರಶ್ನೆ ಮಾಡಿದ್ದಾರೆ. ಬಳಿಕ ಪತ್ರಕರ್ತರ ಪ್ರಶ್ನೆಗೆ ಸರಿಯಾಗಿ ಉತ್ತರಿಸದೇ ಗಂಟು ಮುಖ ಹಾಕಿಕೊಂಡೇ ಅಲ್ಲಿಂದ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments