Select Your Language

Notifications

webdunia
webdunia
webdunia
webdunia

ಭ್ರಷ್ಟಚಾರದ ಪಂದ್ಯಾಟದಲ್ಲಿ ಸಿದ್ದರಾಮಯ್ಯಗೆ ಚಿನ್ನದ ಪದಕ ಖಚಿತ: ಬಿಜೆಪಿ ಲೇವಡಿ

ಭ್ರಷ್ಟಚಾರದ ಪಂದ್ಯಾಟದಲ್ಲಿ ಸಿದ್ದರಾಮಯ್ಯಗೆ ಚಿನ್ನದ ಪದಕ ಖಚಿತ:  ಬಿಜೆಪಿ ಲೇವಡಿ

Sampriya

ಬೆಂಗಳೂರು , ಮಂಗಳವಾರ, 30 ಜುಲೈ 2024 (16:01 IST)
Photo Courtesy X
ಬೆಂಗಳೂರು: ಸದ್ಯ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಒಪಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

 ಇಂದು ನಡೆದ ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದಲ್ಲಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಜೋಡಿ ಕಂಚಿಕ ಪದಕ ಗೆದ್ದಿದೆ. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಎರಡು ಕಂಚಿನ ಪದಕವನ್ನು ಪಡೆಯಿತು.

ಇದೀಗ ಬಿಜೆಪಿ ಪಕ್ಷ ರಾಜ್ಯದಲ್ಲಿ ನಡೆಯುತ್ತಿರುವ ಮುಡಾ ಹಾಗೂ ವಾಲ್ಮೀಕಿ  ಹಗರಣವನ್ನು ಮುಂದಿಟ್ಟು ಸಿಎಂ ಸಿದ್ದರಾಮಯ್ಯ ಅವರನ್ನು ವ್ಯಂಗ್ಯ ಮಾಡಿದೆ.

ಈ ಸಂಬಂಧ ಎಕ್ಸ್‌ನಲ್ಲಿ ಬರೆದುಕೊಂಡಿರುವ ವಿಪಕ್ಷ ನಾಯಕ ಆರ್‌ ಅಶೋಕ್ ಅವರು,  ಒಲಂಪಿಕ್ಸ್‌ನಲ್ಲಿ  ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದಲ್ಲಿ  ಭ್ರಷ್ಟಾಚಾರದ ಪಿತಾಮಹನಿಗೆ ಚಿನ್ನದ ಪದಕ ಖಚಿತ-ನಿಶ್ಚಿತ-ಖಂಡಿತ ಎಂದು ಲೇವಡಿ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ವಯನಾಡು ಭೂ ಕುಸಿತದಿಂದ ತೀವ್ರ ನೊಂದಿದ್ದೇನೆ: ರಾಹುಲ್ ಗಾಂಧಿ