Webdunia - Bharat's app for daily news and videos

Install App

ಸಿದ್ದರಾಮಯ್ಯ ಸರ್ಕಾರದ ದೊಡ್ಡ ಭರವಸೆ ಇಂದು ಜಾರಿಗೆ, ಎತ್ತಿನ ಹೊಳೆಗೆ ಚಾಲನೆ

Krishnaveni K
ಶುಕ್ರವಾರ, 6 ಸೆಪ್ಟಂಬರ್ 2024 (09:40 IST)
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಅತೀ ದೊಡ್ಡ ಭರವಸೆ ಇಂದಿನಿಂದ ಜಾರಿಗೆ ಬರಲಿದೆ. ಎತ್ತಿನ ಹೊಳೆ ಯೋಜನೆ ಹಂತ 1 ಕ್ಕೆ ಇಂದು ಚಾಲನೆ ಸಿಗಲಿದೆ. ಗೌರಿ ಹಬ್ಬ ಶುಭ ಮುಹೂರ್ತದಲ್ಲಿ 7 ಜಿಲ್ಲೆಗಳಿಗೆ ಅನುಕೂಲವಾಗುವ ನೀರಾವರಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.

ಡಿಸಿಎಂ ಡಿಕೆ ಶಿವಕುಮಾರ್ ಇಂದು ಬೆಳಿಗ್ಗೆ ಪೂಜೆ ಸಲ್ಲಿಸುವ ಮೂಲಕ ಯೋಜನೆ ಯಶಸ್ವಿಯಾಗಲು ಪ್ರಾರ್ಥನೆ ನಡೆಸಿದ್ದಾರೆ. ಸಕಲೇಶಪುರದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಹೆಬ್ಬನಬಳ್ಳಿಯಲ್ಲಿ ಬಾಗಿನ ಅರ್ಪಣೆ ಮಾಡಲಿದ್ದಾರೆ.

2010 ರಲ್ಲಿ ಎತ್ತಿನಹೊಳೆ ಯೋಜನೆ ಅನುಷ್ಠಾನದ ಪ್ರಸ್ತಾವನೆಯಾಗಿತ್ತು. 2014 ರಲ್ಲಿ ಯೋಜನೆಗೆ ಶಂಕು ಸ್ಥಾಪನೆಯಾಗಿತ್ತು. 2012 ರಲ್ಲಿ ಯೋಜನೆಗಾಗಿ 8323 ಕೋಡಿ ರೂ. ನೀಡಲು ಅನುಮೋದನೆ ನೀಡಲಾಗಿತ್ತು. 2027 ರಲ್ಲಿ ಯೋಜನೆ ಪೂರ್ತಿಗೊಳಿಸಲು ಸರ್ಕಾರ ನಿರ್ಧಾರ ಮಾಡಿದೆ.

ನೇತ್ರಾವತಿಯ ಉಪನದಿಗಳಾದ ಹೊಂಗಡಹಳ್ಳ, ಎತ್ತಿನಹೊಳೆ, ಕಾಢುಮನೆ, ಕೇರಿಹೊಳೆಯಿಂದ ನೀರು ಪೂರೈಕೆಯಾಗಲಿದೆ. ಈ ಯೋಜನೆಯಿಂದ ಹಾಸನ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಿಗೆ ನೀರು ಸಿಗುವಂತಾಗಲಿದೆ. ವಿಪಕ್ಷಗಳ ವಿರೋಧದ ನಡುವೆಯೂ ಈ ಯೋಜನೆ ಈಗ ಜಾರಿಗೆ ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments