Webdunia - Bharat's app for daily news and videos

Install App

ಸಿದ್ದರಾಮಯ್ಯ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ- ಅಶ್ವಥ್ ನಾರಾಯಣ

Webdunia
ಗುರುವಾರ, 27 ಜುಲೈ 2023 (15:31 IST)
ಗೃಹ ಇಲಾಖೆ ಕ್ರಮ ನೋಡಿದರೆ ಸರ್ಕಾರ ಬದುಕಿದೆಯಾ?ಇಲ್ಲವಾ ಎನ್ನುವ ಅನುಮಾನ ಬರುತ್ತಿದೆ ಎಂದು ಮಾಜಿ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ.ಉಡುಪಿ ಘಟನೆ ನೋಡಿಯೂ ಸರ್ಕಾರದ ಆಶ್ಚರ್ಯಕರ ನಡೆ ಖಂಡನೀಯ.ಸಿದ್ದರಾಮಯ್ಯ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ.ಇದು ಕೋಮುವಾದಿ ಸರ್ಕಾರ, ಜಿಹಾದಿ ಸರ್ಕಾರ ಎನ್ನುವುದು ಉಡುಪಿ ಘಟನೆ ನಿದರ್ಶನವಾಗಿದೆ.ವಿದ್ಯಾರ್ಥಿನಿಯರ ಮೇಲೆ ಪ್ರಕರಣ ದಾಖಲಿಸದೆ ಘಟನೆಯೇ ಆಗಿಲ್ಲ ಎನ್ನುವ ಮಾಹಿತಿ ನೀಡಿದರು,ತಪ್ಪೊಪ್ಪಿಕೊಂಡಿದ್ದಾರೆ, ವೀಡಿಯೋ ಡಿಲೀಟ್ ಆಗಿದೆ,ವೈರಲ್ ಆಗಿಲ್ಲ, ಸಂತ್ರಸ್ಥೆ ದೂರು ನೀಡಿಲ್ಲ ಹಾಗಾಗಿ ಪ್ರಕರಣ ದಾಖಲಿಸಲ್ಲ ಎನ್ನುವ ನಡೆ ಖಂಡನೀಯ.ಇದು ಹುಡುಗಾಟಿಕೆ, ಮಕ್ಕಳಾಟ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.ಇವರಿಗೆ ಮಾನ ಮರ್ಯಾದೆ ಇದೆಯಾ?ಹೆಣ್ಣುಮಕ್ಕಳ ಬಗ್ಗೆ ಕಿಂಚಿತ್ ಗೌರವ ಇದೆಯಾ?ಇವರ ನಾಯಕರು ಸೋನಿಯಾ, ಪ್ರಿಯಾಂಕ ಕೂಡ ಹೆಣ್ಣುಮಕ್ಕಳು,ಇವರಿಗೆ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ಇದೆಯಾ?ಪ್ರತಿಭಟನೆ ಮಾಡಿದ ವಿದ್ಯಾರ್ಥಿನಿಯರನ್ನು ಬೆದರಿಸಿದ್ದಾರೆ,ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ, ಇದು ಖಂಡನೀಯ ಎಂದು‌ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. 
 
ಇದು ಸರ್ಕಾರವಾ? ಚುನಾಯಿತ ಸರ್ಕಾರ ನಡೆದುಕೊಳ್ಳುವ ರೀತಿಯ.ಡಿಕ್ಟೇಟರ್ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ಸರ್ಕಾರ,ಪ್ರಕರಣ ಬೆಳಕಿಗೆ ತಂದ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದಾರೆ,ಈಗ ಪ್ರತಿರೋಧ ಹೆಚ್ಚಾದ ನಂತರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ.ಇವರ ಮನೆಯ ಮಕ್ಕಳು ಶೌಚಾಲಯಕ್ಕೆ ಹೋದಾಗ ವೀಡಿಯೋ ಮಾಡಿದರೆ ಆಗಲೂ ಸಣ್ಣ ವಿಷಯ ಎನ್ನಲಾಗುತ್ತಾ? ಇಷ್ಟೆಲ್ಲಾ ಆದರೂ ಏನೂ ಆಗಿಲ್ಲ ಎನ್ನುವ ಸರ್ಕಾರ ವಜಾ ಮಾಡಬೇಕು, ಗೃಹ ಸಚಿವರ ವಜಾ ಮಾಡಬೇಕು,ಇದು ಜಿಹಾದಿ ಸರ್ಕಾರ, ಯಾರನ್ನು ಬೇಕಾದರೂ ಕೊಲೆ ಮಾಡಿ,ರೇಪ್ ಮಾಡಿ ಎನ್ನುವ ಧೋರಣೆ ತಳೆದಿರುವ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ.ತಕ್ಷಣ ಪ್ರಕರಣ ಬಯಲಿಗೆಳೆದ ವಿದ್ಯಾರ್ಥಿನಿ ಮೇಲಿನ ದೂರು ವಾಪಸ್ ಪಡೆಯಬೇಕು,ಪ್ರಕರಣ ಸಿಬಿಐ, ಎನ್ಐಎಗೆ ವಹಿಸಬೇಕು.ನಾವು ಈ ಹುಡುಗಿ ವೀಡಿಯೋ ತೆಗೆಯುವ ಉದ್ದೇಶ ಹೊಂದಿರಲಿಲ್ಲ,ಬೇರೆ ಹುಡುಗಿ ವೀಡಿಯೋ ತೆಗೆಯಬೇಕಿತ್ತು ಎಂದುಕೊಂಡಿದ್ದೆವು ಎಂದು ಆರೋಪಿತ ವಿದ್ಯಾರ್ಥಿನಿಯರು ಹೇಳಿದ್ದಾರೆ.ಹಾಗಾಗಿ ಇದು ವ್ಯವಸ್ಥಿತ ಪಿತೂರಿ, ಪೂರ್ವನಿಯೋಜಿತ ಕೃತ್ಯ, ಜಿಹಾದಿ ಮನಸ್ಥಿತಿ ಇದೆ,ಅವರ ಟಾರ್ಗೆಟ್ ಬೇರೆ ಆಗಿದ್ದರು ಹಾಗಾಗಿ ಕೇಸ್ ಸಿಬಿಐಗೆ ವಹಿಸಬೇಕು ಎಂದು‌ ಅಶ್ವಥ್ ನಾರಾಯಣ ಕಿಡಿಕಾರಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments