Publish Date: Fri, 05 May 2023 (10:10 IST)
Updated Date: Fri, 05 May 2023 (10:10 IST)
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಹೇಳಿದ್ದಾರೆ.
ಮೈಸೂರಿನ ಕೆಂಪಿಸಿದ್ದಯ್ಯನಹುಂಡಿ ಸಿದ್ದರಾಮಯ್ಯ ಜೊತೆ ರಮ್ಯಾ ಪ್ರಚಾರ ಆರಂಭ ಮಾಡಿದ ನಟಿ ಇದೇ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದರು. ಇಂದು (ಗುರುವಾರ) ಒಂದು ದಿನ ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತೇನೆ. ಇನ್ನೆರಡು ದಿನಗಳು ಬೆಂಗಳೂರು ನಗರ, ಬಿಜಾಪುರ ಹಾಗೂ ಬಾಗಲಕೋಟೆಯಲ್ಲಿ ಪ್ರಚಾರ ಮಾಡುವುದಾಗಿ ಹೇಳಿದರು.
ಜನರನ್ನ ನೋಡಿದ್ರೆ ಖುಷಿಯಾಗುತ್ತೆ. ಪಕ್ಷ ಇನ್ನೂ ಅನೇಕ ಕಡೆ ಪ್ರಚಾರ ಮಾಡಬೇಕಾದ ಜವಬ್ದಾರಿಯನ್ನು ನನಗೆ ನೀಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಶಿವಮೊಗ್ಗ, ಬಿಜಾಪುರ ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.