Select Your Language

Notifications

webdunia
webdunia
webdunia
webdunia

ಭಾಗ್ಯಗಳ ಹೆಸರಿನಲ್ಲಿ ಸಿದ್ದರಾಮಯ್ಯ ಸಾಲ ಭಾಗ್ಯ ಕೊಟ್ಟಿದ್ದಾರೆ- ಬಿಜೆಪಿ ಸಹ ವಕ್ತಾರ ಆರ್.ರಘು ಆರೋಪ

ಮೈಸೂರು
ಮೈಸೂರು , ಶುಕ್ರವಾರ, 1 ಫೆಬ್ರವರಿ 2019 (06:37 IST)
ಮೈಸೂರು : ಭಾಗ್ಯಗಳ ಹೆಸರಿನಲ್ಲಿ ಸಿದ್ದರಾಮಯ್ಯ ಸಾಲ ಭಾಗ್ಯ ಕೊಟ್ಟಿದ್ದಾರೆ ಎಂದು ಬಿಜೆಪಿ ಸಹ ವಕ್ತಾರ ಆರ್.ರಘು ಗಂಭೀರ ಆರೋಪ ಮಾಡಿದ್ದಾರೆ.


ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,’ ಅನ್ನ ಭಾಗ್ಯ, ಶಾದಿ ಭಾಗ್ಯದಂತಹ ಜನಪ್ರಿಯ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲಬೇಕು. ಭಾಗ್ಯಗಳ ಹೆಸರಿನಲ್ಲಿ ಸಿದ್ದರಾಮಯ್ಯ ಸಾಲ ಭಾಗ್ಯ ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.


ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವಾಗ 1 ಲಕ್ಷ ಕೋಟಿ ರೂ.ಗಳಷ್ಟು ಸಾಲ ಇತ್ತು. ಐದು ವರ್ಷ ಪೂರೈಸುವ ಹೊತ್ತಿಗೆ 2.50 ಲಕ್ಷ ಕೋಟಿ ರೂ. ಸಾಲ ಮಾಡಿದ್ದರು. ಈಗಿನ ಸರ್ಕಾರ ಸಿದ್ದರಾಮಯ್ಯ ಮಾಡಿದ ಸಾಲದ ಬಡ್ಡಿ ಕಟ್ಟುವುದರಲ್ಲೇ ಹೈರಾಣಾಗುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದುತ್ವದ ಸಿದ್ಧಾಂತದ ಮೇಲೆ ಆರೋಪ ಮಾಡಿದ ಶಶಿ ತರೂರ್ ವಿರುದ್ಧ ಬಿಜೆಪಿ ಗರಂ