Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಜೀವ ಬೆದರಿಕೆ ಹಾಕಿದ್ದಾರೆ : ಸಿಎಂ

Webdunia
ಸೋಮವಾರ, 22 ಆಗಸ್ಟ್ 2022 (09:31 IST)
ಹಾವೇರಿ : ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಇದೆ ಅನ್ನೋ ಹೇಳಿಕೆಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.
 
ಅವರಿಗೆ ನಿಜವಾಗಿಯೂ ಜೀವ ಬೆದರಿಕೆ ಇದೆಯೇ ಅನ್ನೋದರ ಬಗ್ಗೆ ಸೂಕ್ತ ತನಿಖೆ ಮಾಡ್ತೀವಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಸಂಪತ್ಗೂ ಜೀವ ಬೆದರಿಕೆ ಇದೆಯೇ ಅನ್ನೋದನ್ನ ತನಿಖೆ ನಡೆಸುತ್ತೇವೆ ಎಂದಿದ್ದಾರೆ.

ಐತಿಹಾಸಿಕ ಪುರುಷರ ಬಗ್ಗೆ ಎಲ್ಲಾ ಕಾಲದಲ್ಲೂ ಚರ್ಚೆ ನಡೆಯುತ್ತಲೇ ಇದೆ. ಇಂದಿರಾ ಗಾಂಧಿಯವರೇ ಸಾವರ್ಕರ್ರನ್ನ ದೇಶದ ಶ್ರೇಷ್ಠ ಪುತ್ರ ಅಂದಿದ್ದರು. ಅದು ದಾಖಲೆಗಳಲ್ಲಿದೆ. ಟಿಪ್ಪು ಸುಲ್ತಾನ್ ಬಗ್ಗೆ ವಿವಾದ ಇದೆ.

ಸುಮ್ಮನೆ ಜನರಲ್ಲಿ ಗೊಂದಲ ಸೃಷ್ಟಿಸಿ ಒಂದು ವರ್ಗಕ್ಕೆ ನೋವುಂಟು ಮಾಡಬಾರದು. ಸಮಾಜದಲ್ಲಿ ಶಾಂತಿಯಿಂದಿರಬೇಕು. ದೇಶದಲ್ಲಿನ ಸವಾಲುಗಳನ್ನು ಹೇಗೆ ಎದುರಿಸಬೇಕು ಅನ್ನೋದರ ಬಗ್ಗೆ ಚರ್ಚೆಗಳು ನಡೆಯಬೇಕು ಎಂದು ಸಲಹೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments