Webdunia - Bharat's app for daily news and videos

Install App

ಸಿದ್ದರಾಮಯ್ಯನವರು ರಾಜ್ಯದ ಇತಿಹಾಸದಲ್ಲಿ ಕಪ್ಪು ಚುಕ್ಕೆ ಬರೆದಿದ್ದಾರೆ: ಬಿವೈ ವಿಜಯೇಂದ್ರ

Sampriya
ಗುರುವಾರ, 23 ಜನವರಿ 2025 (15:41 IST)
ಬೆಂಗಳೂರು: ಮಾಧ್ಯಮಗಳಲ್ಲಿ ವರದಿಯಾಗುತ್ತಿರುವಂತೆ ಲೋಕಾಯುಕ್ತದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಲೀನ್ ಚಿಟ್ ಪಡೆದಿರುವುದು ಒಂದು ವೇಳೆ ನಿಜವೇ ಆಗಿದ್ದರೆ ಲೋಕಾಯುಕ್ತ ತನಿಖೆಯ ಬಗ್ಗೆ ನಾವು ಎತ್ತಿದ್ದ ಆಕ್ಷೇಪ ಹಾಗೂ ಅನುಮಾನಗಳು ಸರಿ ಎಂದು ಸಾಬೀತಾಗುತ್ತದೆ.  ಪಾರದರ್ಶಕ ತನಿಖೆಯ ದೃಷ್ಟಿಯಿಂದ ನಾವು ಮೊದಲಿನಿಂದಲೂ ಮುಡಾ ಹಗರಣದ ಕುರಿತಂತೆ ಸಿಬಿಐ ತನಿಖೆಗೆ ಒತ್ತಾಯಿಸುತ್ತಿದ್ದೇವೆ, ಈ ಸಂಬಂಧ ಇಷ್ಟರಲ್ಲೇ ಹೊರಬೀಳಲಿರುವ ಉಚ್ಚ ನ್ಯಾಯಾಲಯದ ತೀರ್ಪನ್ನು  ರಾಜ್ಯದ ಜನತೆ ನಿರೀಕ್ಷಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ತಮ್ಮ ಮೇಲೆ ಸಾಕ್ಷಿಸಮೇತ ಗುರುತರ ಆರೋಪ ಬಂದರೂ ತಾವೇ ನಿಯೋಜಿಸಿರುವ ಅಧಿಕಾರಿಗಳಿರುವ
ಲೋಕಾಯುಕ್ತದ ಮೂಲಕ ತನಿಖೆ ಎದುರಿಸಿ ಲೋಕಾಯುಕ್ತ ಸಂಸ್ಥೆಗೆ ತಮ್ಮ ಪ್ರಭಾವ ಬಳಸಿದ ಮೊದಲ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ರಾಜ್ಯದ ಇತಿಹಾಸದಲ್ಲಿ ಕಪ್ಪು ಚುಕ್ಕೆ ಬರೆದಿದ್ದಾರೆ.

ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿದ ರೀತಿ, ನೀತಿ, ಲೋಕಾಯುಕ್ತ ತನಿಖಾಧಿಕಾರಿಗಳ ವರ್ತನೆ ಸಂಪೂರ್ಣ ಸಂಶಯಾಸ್ಪದವಾಗಿದ್ದು ಲೋಕಾಯುಕ್ತದ ತನಿಖೆಯ ವರದಿಯು ಪಾರದರ್ಶಕವೆಂದು ಸಾಬೀತುಪಡಿಸಿಕೊಳ್ಳಲು ಸಾಧ್ಯವೇ ಇಲ್ಲ. ಈ ನಿಟ್ಟಿನಲ್ಲಿ ಈಗಾಗಲೇ ಜಾರಿ ನಿರ್ದೇಶನಾಲಯ (ಇಡಿ) ವಸ್ತು ಸ್ಥಿತಿಯನ್ನು ಒಳಗೊಂಡ ತನ್ನ ತನಿಖೆಯ ಅಂಶವನ್ನು ಉಲ್ಲೇಖಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಇದರಿಂದ ಈಗಾಗಲೇ ಗಲಿಬಿಲಿ ಗೊಂಡಿರುವ ಮುಖ್ಯಮಂತ್ರಿಗಳು ಲೋಕಾಯುಕ್ತದ ಮೂಲಕ ಕ್ಲೀನ್ ಚಿಟ್ ಪಡೆದುಕೊಳ್ಳಲು ತಮ್ಮ ಸಂಪೂರ್ಣ ಪ್ರಭಾವವನ್ನು ಬಳಸಿಕೊಂಡಿದ್ದಾರೆ ಎಂಬುದು ಲೋಕಾಯುಕ್ತ ಅಧಿಕಾರಿಗಳ ನಡೆಯಿಂದ ವೇದ್ಯವಾಗುತ್ತಿದೆ.

ಇಡಿ ವರದಿ ಹಾಗೂ ದೂರುದಾರರು ನೀಡಿರುವ ದಾಖಲೆಗಳನ್ನು ಆಧರಿಸಿ ಹಾಗೂ ಈಗಾಗಲೇ ಘನ ಉಚ್ಚ ನ್ಯಾಯಾಲಯದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಗೆ ಸಂಬಂಧಿಸಿದಂತೆ ನೀಡಲಾಗಿರುವ ತೀರ್ಪಿನಲ್ಲಿರುವ ಅಂಶಗಳನ್ನು ಉಲ್ಲೇಖಿಸಿ  ಸಿಬಿಐ ತನಿಖೆ ನಡೆದರೆ ಮಾತ್ರ ರಾಜ್ಯ ಕಂಡ ಅತಿ ಭ್ರಷ್ಟ, ಸ್ವಜನ ಪಕ್ಷಪಾತದ, ಬಹುದೊಡ್ಡ ನಿವೇಶನಗಳ ಲೂಟಿಕೋರತನ ಹಗರಣದ ಹೂರಣ ಬಯಲಿಗೆ ಬರಲು ಸಾಧ್ಯವಾಗುತ್ತದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments