ಬಿಎಸ್​​ವೈ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

Webdunia
ಗುರುವಾರ, 23 ಫೆಬ್ರವರಿ 2023 (18:16 IST)
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ನನ್ನ ಮೇಲೆ ಬಹಳ ಪ್ರೀತಿಯಿದೆ. ನನಗೆ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಹೇಳಿದ್ದಾರೆ. ಹೀಗಾಗಿ ಯಡಿಯೂರಪ್ಪಗೆ ನಾನು ಧನ್ಯವಾದ ತಿಳಿಸುತ್ತೇನೆ. ಸಿಎಂ ಸ್ಥಾನದಿಂದ ಇಳಿಸಿದ ಮೇಲೆ ಅವರು ಸ್ವಲ್ಪ ಡಿಸ್ಟರ್ಬ್ ಆಗಿದ್ದಾರೆ ಎಂದು ವಿಜಯಪುರದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಬಾದಾಮಿಯಲ್ಲಿ ಸ್ಪರ್ಧಿಸದ ವಿಚಾರವಾಗಿ ಯಡಿಯೂರಪ್ಪ ಬುಧವಾರ ವಿಧಾನಸಭೆಯಲ್ಲಿ ಉಲ್ಲೇಖಿಸಿದ್ದರು. ಸೋಲಿನ ಭೀತಿಯಿಂದ ಸಿದ್ದರಾಮಯ್ಯ ಕ್ಷೇತ್ರ ಬದಲಾಯಿಸುತ್ತಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಎಸ್​​ವೈಗೆ ದೇವರು ಆಯುಷ್ಯ, ಆರೋಗ್ಯ ಕೊಡಲೆಂದು ಪ್ರಾರ್ಥಿಸುತ್ತೇನೆ. ನಾನು ಬಾದಾಮಿ ಕ್ಷೇತ್ರದಿಂದ ಗೆಲ್ಲುವುದಿಲ್ಲ ಎಂದೇನಿಲ್ಲ. ಸ್ಪರ್ಧಿಸಿದರೆ ಗೆದ್ದೇ ಗೆಲ್ಲುತ್ತೇನೆ. ಬಾದಾಮಿ ಕ್ಷೇತ್ರದಲ್ಲಿ ನಾನು ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ಲುತ್ತೇನೆ. 5 ವರ್ಷ ಶಾಸಕನಾಗಿ ಕ್ಷೇತ್ರದ ಜನರ ಕಷ್ಟ ಸುಖಕ್ಕೆ ಸ್ಪಂದಿಸಿದ್ದೇನೆ. ಹೀಗಾಗಿ ಬಾದಾಮಿ ಜನರಿಗೆ ದ್ರೋಹ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ತೀರ್ಮಾನಿಸುವುದು ನನಗೆ ಬಿಟ್ಟ ವಿಚಾರ. ನಂತರ ಕಾಂಗ್ರೆಸ್ ಪಕ್ಷ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments