ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

Krishnaveni K
ಸೋಮವಾರ, 24 ನವೆಂಬರ್ 2025 (13:10 IST)
ಬೆಂಗಳೂರು: ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಇಂದು ಶಿಡ್ಲಘಟ್ಟದಲ್ಲಿ ಮಾಧ್ಯಮದೊಂದಿಗೆ ಅವರು ಮಾತನಾಡಿದ್ದಾರೆ.

ರಾಜ್ಯದಲ್ಲಿ ಕುರ್ಚಿ ತಿಕ್ಕಾಟದ ವಿಚಾರ ಭಾರೀ ಸದ್ದು ಮಾಡುತ್ತಿದೆ. ಡಿಕೆ ಶಿವಕುಮಾರ್ ಬಣ ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿದ್ದರೆ, ಇತ್ತ ಸಿದ್ದರಾಮಯ್ಯನವರು ಬಿಟ್ಟು ಕೊಡುತ್ತಿಲ್ಲ ಎನ್ನಲಾಗುತ್ತಿದೆ. ಇದರ ನಡುವೆ ಮಾಧ್ಯಮದ ಮುಂದೆ ಅವರು ಮಹತ್ವದ ಮಾತನಾಡಿದ್ದಾರೆ.

ಇನ್ನು ಮಾಧ್ಯಮ ಪ್ರತಿನಿಧಿಗಳು ಡಿಕೆಶಿಯವರು ಸಿಎಂ ಆಗ್ತಾರಾ ಸರ್ ಎಂದು ಪ್ರಶ್ನಿಸಿದ್ದಕ್ಕೆ ಹೈಕಮಾಂಡ್ ಹೇಳಿದಂತೆ ಕೇಳ್ತೀವಿ ಎಂದರೂ ಅದೇ ಪ್ರಶ್ನೆ ಕೇಳ್ತೀರಲ್ಲ. ಹೈಕಮಾಂಡ್ ಏನು ಹೇಳ್ತದೋ ಅದನ್ನೇ ಮಾಡ್ತೇವೆ ಎಂದಿದ್ದಾರೆ.

‘ಸರ್ಕಾರದಲ್ಲಿ ಯಾವುದೇ ಬದಲಾವಣೆ ಮಾಡುವ ಸಂಬಂಧ ನಮ್ಮಲ್ಲಿ ಹೈಕಮಾಂಡ್‌ನವರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ನಾನು ಹಾಗೂ ಡಿ.ಕೆ.ಶಿವಕುಮಾರ್ ಒಪ್ಪಬೇಕು.

ಹೈಕಮಾಂಡ್ ಅನ್ನು ಐದು ತಿಂಗಳ ಹಿಂದೆ ಭೇಟಿಯಾದಾಗ ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ  ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇನೆ’ ಎಂದಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments