Webdunia - Bharat's app for daily news and videos

Install App

ಸಿದ್ದರಾಮೋತ್ಸವ ರಾಜಕೀಯ ಕಾರ್ಯಕ್ರಮವೇ –ಸಿದ್ದರಾಮಯ್ಯ

Webdunia
ಶುಕ್ರವಾರ, 8 ಜುಲೈ 2022 (20:02 IST)
ಸಿದ್ದರಾಮೋತ್ಸವ ರಾಜಕೀಯ ಕಾರ್ಯಕ್ರಮವೇ. ರಾಜಕೀಯವಿಲ್ಲದೇ ಏನೂ ಇಲ್ಲ. ಅಲ್ಲಿ ಎಲ್ಲರೂ ರಾಜಕೀಯ ನಾಯಕರೇ ಇರುತ್ತಾರೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜೊತೆ ಉಪಹಾರ ಸೇವಿಸಿ, ರಾಜಕೀಯ ಸಮಾಲೋಚನೆ ನಡೆಸಿ ಬಳಿಕ ಮಾತನಾಡಿ. ಸಿದ್ದರಾಮಯ್ಯ ಹುಟ್ಟುಹಬ್ಬದ ಕಾರ್ಯಕ್ರಮ ಪಕ್ಷದ ಕಡೆಯಿಂದ ನಡೆಯೋದು. ಸಮಿತಿಯಲ್ಲಿ ಇರುವವರು ಕಾಂಗ್ರೆಸ್ ನಾಯಕರು. ಕಾರ್ಯಕ್ರಮಕ್ಕೆ ಬರಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಬಿ.ಕೆ. ಹರಿಪ್ರಸಾದ್, ಡಿಕೆಶಿ, ಮುನಿಯಪ್ಪ, ಎಂ.ಬಿ.ಪಾಟೀಲ್, ಖರ್ಗೆ ಅವರಿಗೆ ನಾನೇ ಆಹ್ವಾನ ನೀಡಿದ್ದೇನೆ. ನನ್ನ ಹುಟ್ಟುಹಬ್ಬವನ್ನು ಪಕ್ಷದವರೇ ಮಾಡುತ್ತಾರೆ. ಪಕ್ಷದ ವೇದಿಕೆ ಅಲ್ಲದೇ ಇದ್ದರೂ ಪಕ್ಷದವರೇ ಮಾಡುತ್ತಿದ್ದಾರೆಂದು ತಿಳಿಸಿದರು. ನನ್ನ ರಾಜಕೀಯ ಜೀವನದ ಕೆಲವು ಪ್ರಮುಖ ಘಟನೆಗಳ ಬಗ್ಗೆ ನೆನಪು ಮಾಡಿಕೊಂಡರೆ ತಪ್ಪಾ? ಸಮಾವೇಶದಲ್ಲಿ ರಾಜಕೀಯ ಸಂದೇಶ ಇರಲಿದೆ. ನಾವೇನು ಸನ್ಯಾಸಿಗಳಾ? ರಾಹುಲ್ ಗಾಂಧಿ, ಡಿಕೆಶಿ ಸನ್ಯಾಸಿನಾ? ಏನು ಸಂದೇಶ ಇರಬೇಕೋ ಇರಲಿದೆ. ನಮ್ಮ ಕಾಲದ ಸಾಧನೆ ತೋರಿಸ್ತೀವಿ ಅಂದರೆ ಅದರಲ್ಲಿ ರಾಜಕೀಯ ಇದ್ದೇ ಇದೆ. ನನ್ನ ಜೀವನ ಸಾಧನೆ ಅಂದರೆ ಅದು ರಾಜಕೀಯ. ನಾನು ಬೇರೆ ಪಕ್ಷದ ಯಾರನ್ನೂ ಕರೆಯುತ್ತಿಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments