ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದ ನಳೀನ್ ಕುಮಾರ್ ಕಟೀಲ್...!

Webdunia
ಬುಧವಾರ, 29 ಸೆಪ್ಟಂಬರ್ 2021 (12:29 IST)
ಆರ್​​ಎಸ್​ಎಸ್​ನದ್ದು ತಾಲಿಬಾನ್ ಸಂಸ್ಕೃತಿ ಎಂದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭರ್ಜರಿ ಟಾಂಗ್ ನೀಡಿದ್ದಾರೆ.


ಮಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದು ಗುಡುಗಿದ್ರು.
ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಆಡಳಿತದಲ್ಲಿ ಅನೇಕರ ಹತ್ಯೆಯಾಯ್ತು. ಅವರ ಆಡಳಿತದಲ್ಲಿ ರಾಜ್ಯದಲ್ಲಿ ತಾಲಿಬಾನ್ ಸ್ಥಿತಿಯೇ ಇತ್ತು. ರಾಜ್ಯದಲ್ಲಿ 24 ಹಿಂದೂ ಯುವಕರನ್ನು ಕೊಲೆಗೈಯಲಾಯ್ತು. ದಕ್ಷಿಣ ಕನ್ನಡದಲ್ಲಿ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ದೀಪಕ್ ರಾವ್, ಮಡಿಕೇರಿ ಕುಟ್ಟಪ್ಪ ಎಲ್ಲರೂ ಸಿದ್ದರಾಮಯ್ಯ ಆಡಳಿತಾವಧಿಯಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ರು.
ಎಟಿಎಂ ಒಳಗೆ ಹೋದ ಮಹಿಳೆಯ ಮೇಲೆ ಹಲ್ಲೆಯಾಯ್ತು. ಸುಳ್ಯದಲ್ಲಿ ಕಾಲೇಜಿಗೆ ಹೋದ ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲಾಯ್ತು. ಇದೆಲ್ಲ ನೋಡಿದ್ರೆ ಸಿದ್ದರಾಮಯ್ಯ ಆಡಳಿತ ತಾಲಿಬಾನ್ ಆಡಳಿತವಾಗಿದೆ. ಇದೇ ಕಾರಣಕ್ಕೆ ನಾನು ಸಿದ್ದರಾಮಯ್ಯರನ್ನು ಭಯೋತ್ಪಾದಕ ಎಂದು ಕರೆಯುತ್ತೇನೆ. ಸಿದ್ದರಾಮಯ್ಯ ಆಡಳಿತದಲ್ಲಿ ರಾಜ್ಯದಲ್ಲಿ ಪ್ರತಿ ದಿನ ಕೊಲೆ, ಸುಲಿಗೆಗಳು ನಡೆಯುತ್ತಿದ್ದವು ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಮುಂದಿನ ಸುದ್ದಿ
Show comments