Webdunia - Bharat's app for daily news and videos

Install App

ಸಿಎಂ ಆಗಿ ಸಿದ್ದರಾಮಯ್ಯನವರು ಉತ್ತಮ ಕೆಲಸ ಮಾಡುತ್ತಿದ್ದಾರೆ: ಸಿದ್ಧಲಿಂಗ ಸ್ವಾಮೀಜಿ

Sampriya
ಶುಕ್ರವಾರ, 31 ಜನವರಿ 2025 (19:51 IST)
Photo Courtesy X
ಸುತ್ತೂರು (ಮೈಸೂರು ಜಿಲ್ಲೆ): ನುಡಿದಂತೆ ಸಿದ್ದರಾಮಯ್ಯ ಅವರು ಐದು ಗ್ಯಾರಂಟಿಗಳನ್ನೂ ಸಮರ್ಥವಾಗಿ ಜಾರಿಗೊಳಿಸಿ, ರಾಜ್ಯದ ಆರ್ಥಿಕ ಸ್ಥಿತಿ ಚೆನ್ನಾಗಿದೆ ಎಂದು ತೋರಿಸಿದ್ದಾರೆ.  ಈ ಮೂಲಕ ಸಿದ್ದರಾಮಯ್ಯ ಅವರು ಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಶ್ಲಾಘಿಸಿದರು.

ಇಲ್ಲಿ ಸುತ್ತೂರು ಮಠದಿಂದ ಶುಕ್ರವಾರ ಆಯೋಜಿಸಿದ್ದ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮಾಜವಾದಿ ಚಿಂತನೆಯ ಅವರ ಮೇಲೆ ಬಸವಾದಿ ಶರಣರ ಪ್ರಭಾವ ಸಾಕಷ್ಟಿದೆ. ಜಾತ್ರೆಗಳು ಜನರನ್ನು ಒಗ್ಗೂಡಿಸುವಲ್ಲಿ, ಭಕ್ತಿ, ಅರ್ಚನಾ ಮನೋಭಾವ ಬೆಳೆಸುವಲ್ಲಿ ಹಾಗೂ ಸಾಮರಸ್ಯ ಮೂಡಿಸುವಲ್ಲಿ ಸಹಕಾರಿಯಾಗಿವೆ ಎಂದು ಹೇಳಿದರು.

ಸಂವಿಧಾನ ನಮ್ಮನ್ನು ಒಗ್ಗೂಡಿಸುತ್ತದೆ ಎಂಬುದನ್ನು ಎಲ್ಲರೂ ಒಪ್ಪಬೇಕು. 12ನೇ ಶತಮಾನದಲ್ಲಿ ಬಸವಣ್ಣ ಅವರು ನೀಡಿರುವುದು ಮಾನವೀಯ ಸಂವಿಧಾನ. ಭಾರತೀಯ ಪ್ರಜ್ಞೆ ಬೆಳೆಸಿಕೊಳ್ಳಬೇಕಾದರೆ ಸಂವಿಧಾನವನ್ನು ಗೌರವಿಸಬೇಕು. ರಾಷ್ಟ್ರ ಲಾಂಛನಗಳನ್ನು ಗೌರವಿಸಬೇಕು ಎಂದು ಕರೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments