Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬಂದಿದೆ ಎಂದು ಯಡವಟ್ಟು ಮಾಡಿಕೊಂಡ ಸಚಿವ

ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬಂದಿದೆ ಎಂದು ಯಡವಟ್ಟು ಮಾಡಿಕೊಂಡ ಸಚಿವ
ಕಲಬುರ್ಗಿ , ಭಾನುವಾರ, 17 ಡಿಸೆಂಬರ್ 2017 (20:14 IST)
ದೇಶದ ಇತಿಹಾಸದಲ್ಲಿ ಈಗ ಸಿದ್ದರಾಮಯ್ಯನವರು ಜೈಲಿಗೆ ಹೋಗುವ ಪರಿಸ್ಥಿತಿ ಬಂದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ.

ಜೇವರ್ಗಿ ತಾಲೂಕಿನ ಯಡ್ರಾಮಿಯಲ್ಲಿ ಸಾಧನಾ ಸಮಾವೇಶದಲ್ಲಿ ಮಾತನಾಡುವ ವೇಳೆ ಸಚಿವರು, ಈ ಯಡವಟ್ಟು ಮಾಡಿಕೊಂಡಿದ್ದು, ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬಂದಿದೆ. ಅದಕ್ಕೆ ಉತ್ತರ ಕೊಡಿ ಎಂದು ಹೇಳುತ್ತಿದ್ದಂತೆ ಸಭಿಕರು ಕೂಗಾಡಿದರು. ವೇದಿಕೆ ಮೇಲಿದ್ದ ವ್ಯಕ್ತಿಯೊಬ್ಬರು ಬಂದು ಸಚಿವರ ಕಿವಿಯಲ್ಲಿ ಯಡವಟ್ಟಿನ ಬಗ್ಗೆ ತಿಳಿಸಿದ್ದಾರೆ.

ನಂತರ ಕ್ಷಮೆ ಕೇಳಿದ ಸಚಿವರು ಯಡಿಯೂರಪ್ಪನವರ ವಿರುದ್ಧ ಟೀಕೆ ಮಾಡುವುದು ಆರಂಭಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ವಿರುದ್ಧ ಎಸಿಬಿಯಲ್ಲ 56 ಪ್ರಕರಣ– ಯಡಿಯೂರಪ್ಪ