ಸಿದ್ದರಾಮಯ್ಯ ಒಂಥರಾ ಆನೆ ಇದ್ದ ಹಾಗಂತೆ…

Webdunia
ಸೋಮವಾರ, 13 ಮೇ 2019 (14:59 IST)
ಆನೆ ದಾರಿಯಲ್ಲಿ ನಡೆದುಕೊಂಡು ಹೋಗುವಾಗ ನಾಯಿಗಳೆಲ್ಲ ಬೊಗಳುತ್ತಿರುತ್ತವೆ. ಹಾಗಂಥ ಆನೆ ಹಿಗ್ಗೋದೂ ಇಲ್ಲ ಕುಗ್ಗೋದು ಇಲ್ಲ. ಸಿದ್ದರಾಮಯ್ಯ ಆನೆ ಥರ. ಹೊಗಳಿಕೆಗೆ ಹಿಗ್ಗೋದೂ ಇಲ್ಲ. ಯಾರೋ ಬೈಯ್ದರೆ ಕುಗ್ಗೋದೂ ಇಲ್ಲ ಅಂತ ಕೈ ಪಡೆ ಶಾಸಕ ಹೇಳಿಕೆ ನೀಡಿದ್ದಾರೆ.

ಹೂ ಈಸ್ ಕುಪೇಂದ್ರ ರೆಡ್ಡಿ..? ಕುಪೇಂದ್ರ ರೆಡ್ಡಿ ಎಂಪಿ ಇರಬಹುದು. ಆದರೆ ಕುಪೇಂದ್ರ ರೆಡ್ಡಿ ಸಮ್ಮಿಶ್ರ ಸರ್ಕಾರ ಮಾಡಿದ್ದಾರಾ...? ರಾಹುಲ್ ಗಾಂಧಿ, ದೇವೇಗೌಡ ಸಮ್ಮಿಶ್ರ ಸರ್ಕಾರ ಮಾಡಿದ್ದಾರೆ. ಇದಕ್ಕೆಲ್ಲ ಮಾತನಾಡೋದಕ್ಕೆ ಕುಪೇಂದ್ರ ರೆಡ್ಡಿ ಯಾರು..? ಕುಪೇಂದ್ರ ರೆಡ್ಡಿಗೆ ದೇವೇಗೌಡರು ಜಿಪಿಎ ಕೊಟ್ಟಿದ್ದಾರಾ..? ದೇವೇಗೌಡರು ಮಾತನಾಡೋದನ್ನೆಲ್ಲ ಕುಪೇಂದ್ರ ರೆಡ್ಡಿ ಮಾತನಾಡ್ತಾರೆ ಅಂತ ಜಿಪಿಎ‌ ಕೊಟ್ಟಿದ್ದಾರಾ..? ಎಂದು ಪ್ರಶ್ನೆ ಮಾಡಿದ್ರು.

ನಮ್ಮನ್ನು ಚಮಚಾಗಳು ಅನ್ನೋ ವಿಶ್ವನಾಥ್ ಮಟ್ಟದಲ್ಲಿ ನಾವಿಲ್ಲ. ‌ಅವರು ಜೆಡಿಎಸ್ ನ ರಾಜ್ಯಾಧ್ಯಕ್ಷರು. ಅವರ ಮಟ್ಟಕ್ಕೆ ನಾವಿಲ್ಲ. ನಾವು ಸಣ್ಣಪುಟ್ಟ ಕ್ಷೇತ್ರಗಳ ಶಾಸಕರು ಅಂತ ಎಸ್. ಟಿ. ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ.

ಸೋಮಶೇಖರ್ ಯಾವಾಗ್ಲೂ ಸಾಫ್ಟ್ ಆಗಿಲ್ಲ. ನನ್ನ ಲೇವಲ್ಲಿಗೆ ತಕ್ಕಂತೆ ಮಾತಾಡ್ತಿದ್ದೇನೆ. ಸಿದ್ದರಾಮಯ್ಯ ನಮ್ಮ ನಾಯಕ, ಸಿಎಲ್ಪಿ ಲೀಡರ್ ಹೌದು. ಅವರು ಆನೆ ಇದ್ದಂಗೆ ಎಂದರು.

ಮೈತ್ರಿ ಬೇಡ ಅಂದಾದ್ರೆ ಸಿಎಂ ಕುಮಾರಸ್ವಾಮಿ ಅವ್ರು ಎರಡು ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋಗ್ತಿದ್ದಾರೆ. ಇಲ್ಲಿ ಮೈತ್ರಿ ಬೇಡ, ಚಮಚಾಗಿರಿ ಅಂತಾ ಯಾಕೆ ಹೇಳ್ತಿದ್ದಾರೆ ? ಸಿಎಂ ಅಲ್ಲಿ ಅಭ್ಯರ್ಥಿಗಳನ್ನ ಗೆಲ್ಲಿಸಬೇಕು ಅಂತಾ ಪ್ರಚಾರಕ್ಕೆ ಏಕೆ ಹೋಗ್ತಿದ್ದಾರೆ ? ಅಂತ ಕೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments