Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯಗೆ ಯೋಗ್ಯತೆಯಿಲ್ಲ : ಆರ್.ಅಶೋಕ್

ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯಗೆ ಯೋಗ್ಯತೆಯಿಲ್ಲ : ಆರ್.ಅಶೋಕ್
ಬೆಂಗಳೂರು , ಬುಧವಾರ, 12 ಜುಲೈ 2017 (13:03 IST)
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಿಎಂ ಆಗುವ ಯೋಗ್ಯತೆಯಿಲ್ಲ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ ಮತ್ತು ಆರೆಸ್ಸೆಸ್ ಮುಖಂಡರನ್ನು ಯಾಕೆ ಟಾರ್ಗೆಟ್ ಮಾಡುತ್ತೀದ್ದಿರಿ? ಅಯೋಧ್ಯೆಯ ತೀರ್ಪು ಬಂದಾಗಲೂ ಯಾವುದೇ ಗಲಭೆಗಳಾಗಿರಲಿಲ್ಲ. ಆದರೆ. ಇದೀಗ ಪ್ರತಿನಿತ್ಯ, ಬಿಜೆಪಿ ಮತ್ತು ಆರೆಸ್ಸೆಸ್ ಕಾರ್ಯಕರ್ತರನ್ನು ಗುರಿಪಡಿಸಿ ಹಲ್ಲೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. 
 
ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವಿಚ್ಚಿದ್ರಕಾರಿ ಶಕ್ತಿಗಳು ಹತ್ಯಾಕೃತ್ಯಗಳಲ್ಲಿ ತೊಡಗಿವೆ. ಶಱತ್ ಮಡಿವಾಳ ಅದಕ್ಕೊಂದು ಉದಾಹರಣೆಯಾಗಿದೆ ಎಂದು ಕಿಡಿಕಾರಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಧಿಕಾರ ನಡೆಸುವ ತಾಕತ್ತೂ ಇಲ್ಲ. ಕೇವಲ ಮುಸ್ಲಿಂ ಸಮುದಾಯವನ್ನು ಓಲೈಸಿ ಮತಬ್ಯಾಂಕ್‌ ಸೃಷ್ಟಿಸುವಲ್ಲಿ ನಿರತರಾಗಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನೀವು ನಂಬಲೇಬೇಕು! ಈ ಮದುವೆ ನಿಲ್ಲಲು ಪ್ರಧಾನಿ ಮೋದಿಯೇ ಕಾರಣ!