Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಅವರೇ ಹೈಕಮಾಂಡ್:.ವಿಶ್ವನಾಥ್ ಮತ್ತೆ ವಾಗ್ದಾಳಿ

ಕಾಂಗ್ರೆಸ್
ಮೈಸೂರು: , ಶನಿವಾರ, 13 ಮೇ 2017 (13:40 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್‌ಗೆ ಹೈಕಮಾಂಡ್‌ನಂತಾಗಿದ್ದಾರೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಮತ್ತೆ ತಮ್ಮದೇ ಪಕ್ಷದ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಯಾರ ಮಾತನ್ನು ಕೇಳುತ್ತಿಲ್ಲ. ಸಾಧನಾ ಸಮಾವೇಶ ಮಾಡುವುದರ ಬದಲಿಗೆ ಆತ್ಮವಿಮರ್ಶೆ ಸಮಾವೇಶ ಮಾಡಬೇಕಾಗಿತ್ತು ಎಂದು ಲೇವಡಿ ಮಾಡಿದರು.
 
ರಾಜ್ಯದಲ್ಲಿ ಭ್ರಷ್ಟಾಚಾರ ಹಾಗೆಯೇ ಇದೆ.  ಸರಕಾರದ ಸಾಧನೆಯ ಬಗ್ಗೆ ಕೇವಲ ಅಂಕಿ ಅಂಶಗಳನ್ನು  ಬಿಡುಗಡೆಗೊಳಿಸಿದರೆ ಸಾಲದು. ಅದರ ಬಗ್ಗೆ ಚರ್ಚೆಯಾಗಬೇಕು ಎಂದು ತಿರುಗೇಟು ನೀಡಿದರು. 
 
ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆ ಮಾಡಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಪಾರದರ್ಶಕ ಅಡಳಿತ ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಇದೀಗ ಎಲ್ಲವನ್ನು ಮರೆತಿದ್ದಾರೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

Share this Story:

Follow Webdunia kannada

ಮುಂದಿನ ಸುದ್ದಿ

150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರ್ತೇವೆ: ಸಿಎಂಗೆ ಬಿಎಸ್‌ವೈ ಸವಾಲ್