Webdunia - Bharat's app for daily news and videos

Install App

ಸಿದ್ದರಾಮಯ್ಯ ವಿಚಾರದ ಪ್ರಚಾರದಿಂದ ಹರಿಯಾಣ ಚುನಾವಣೆಯಲ್ಲಿ ಹಿನ್ನಡೆ: ಕೋಳಿವಾಡ

Sampriya
ಮಂಗಳವಾರ, 8 ಅಕ್ಟೋಬರ್ 2024 (14:00 IST)
Photo Courtesy X
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಹಳ್ಳಿ-ಹಳ್ಳಿಗೆ ತೆರಳಿ, ಕರ್ನಾಟಕದ ವಿಚಾರವನ್ನು ಪ್ರಚಾರ ಮಾಡ್ತಾರೆ. ಅದಕ್ಕೆ ಕಾಂಗ್ರೆಸ್‌ಗೆ ಹಿನ್ನಡೆ ಆಗುತ್ತದೆ ಎಂದು ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಹೇಳಿದರು.

ನಾನು ಅವತ್ತೇ ಹೇಳಿದ್ದೆ. ಮೋದಿ ಹರಿಯಾಣದಲ್ಲಿ ಹಳ್ಳಿ ಹಳ್ಳಿಗೆ ಹೋಗಿ ಸಿದ್ದರಾಮಯ್ಯ ವಿಚಾರ ಪ್ರಚಾರ ಮಾಡ್ತಾರೆ. ಆದ್ದರಿಂದ ಹಿನ್ನಡೆ ಆಗುತ್ತದೆ ಎಂದು ಹೇಳಿದ್ದೆ, ಈಗ ಅದು ಎಫೆಕ್ಟ್ ಆಗಿದೆ. ಹರಿಯಾಣದಲ್ಲಿ ಹಿನ್ನಡೆ ಆಗುತ್ತಿದೆ. ಪಾರ್ಟಿಗೆ ಮುಜುಗರ ಆಗಿದೆ ಎಂದು ತಿಳಿಸಿದರು.

ಸಿಎಂ ವಿಚಾರದಲ್ಲಿ ನಾನು ಅಂದು ಹೇಳಿದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಪಕ್ಷಕ್ಕೆ ಧಕ್ಕೆಯಾದರೆ ನೋಟಿಸ್ ಕೊಡುತ್ತಾರೆ. ಪಕ್ಷದ ದೃಷ್ಟಿಯಿಂದ ಹೇಳಿದ್ದೇನೆ. ಇವತ್ತು ಹರಿಯಾಣ ಚುನಾವಣೆಯಲ್ಲಿ ಎಫೆಕ್ಟ್ ಆಗಿದೆ ಎಂದರು.

ಪ್ರಚಾರದಲ್ಲಿ ಮೋದಿ ಕರ್ನಾಟಕದ ಬಗ್ಗೆ ಮಾತನಾಡಿದ್ದರು. ಪದೇ ಪದೇ ಮಾತನಾಡಿರುವುದು ಎಫೆಕ್ಟ್ ಆಗಿದೆ. ಇನ್ನೂ ಪೂರ್ಣ ಪ್ರಮಾಣದ ಫಲಿತಾಂಶ ಬಂದಿಲ್ಲ. ಆದರೆ ಎಫೆಕ್ಟ್ ಆಗಿದೆ. ನಾನು ಸಕ್ರಿಯ ರಾಜಕಾರಣದಲ್ಲಿ ಇಲ್ಲ. ಆದರೆ ಪಕ್ಷ ಉಳಿಸಲು ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments