Select Your Language

Notifications

webdunia
webdunia
webdunia
webdunia

ಪಾಕಿಸ್ತಾನಕ್ಕೆ ಬೆಂಬಲ ನೀಡುವ ಸಿದ್ದರಾಮಯ್ಯ– ಜೋಶಿ ಟೀಕೆ

ಪಾಕಿಸ್ತಾನಕ್ಕೆ ಬೆಂಬಲ ನೀಡುವ ಸಿದ್ದರಾಮಯ್ಯ– ಜೋಶಿ ಟೀಕೆ
ಕೊಪ್ಪಳ , ಬುಧವಾರ, 31 ಜನವರಿ 2018 (18:50 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಾರೆ. ಎಂದು ಆರೋಪಿಸಿರವ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತೊಗೆಯಬೇಕು ಎಂದು ಹೇಳಿದ್ದಾರೆ.
 
ಕೊಪ್ಪಳದಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಮತ್ತು ಭಜರಂಗದಳ ಭಯೋತ್ಪಾದನೆ ಸಂಘಟನೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹುಶಃ ಪಾಕಿಸ್ತಾನದಲ್ಲಿ ಬೆಂಬಲ ಸಿಕ್ಕಿರಬೇಕು ಎಂದು ಲೇವಡಿ ಮಾಡಿದ್ದಾರೆ.
 
ವೋಟ್ ಬ್ಯಾಂಕ್‌ಗಾಗಿ ಏನು ಬೇಕಾದರೂ ಮಾಡುವ ಸಿದ್ದರಾಮಯ್ಯ ಅವರ ಮುಠ್ಠಾಳತನದ ಪರಮಾವಧಿಯಾಗಿದೆ. ಮಹಾದಾಯಿ ವಿಚಾರದಲ್ಲಿ ಕನ್ನಡ ಪರ ಸಂಘಟನೆಗಳಿಂದ ಹೋರಾಟ ಮಾಡಿಸಿದ್ದಾರೆ ಎಂದು ಟೀಕಿಸಿದ್ದಾರೆ.
 
ಬಳ್ಳಾರಿವರೆಗೆ ಪಾದಯಾತ್ರೆ ನಡೆಸಿದ್ದ ಸಿದ್ದರಾಮಯ್ಯ ಬಿಜೆಪಿಯವರು ಜೈಲಿಗೆ ಹೋಗಿ ಬಂದವರು ಎಂದು ಹೇಳಿದ್ದಾರೆ. ಆದರೆ, ಈಗ ಆನಂದಸಿಂಗ್ ಒಳ್ಳೆಯವರು ಎಂದು ಹೇಳುತ್ತಿದ್ದಾರೆ ಎಂದು ದೂಷಿಸಿದ್ದಾರೆ.
 
ವಾಟಾಳ್ ನಾಗರಾಜ್‌ಗೆ ಬುದ್ದಿ ಇಲ್ಲ. ಮಹಾದಾಯಿ ಎಲ್ಲಿ ಹರಿಯುತ್ತದೆ ಎನ್ನುವುದು ಕೂಡ ಗೊತ್ತಿಲ್ಲ. ವಾಟಾಳ್ ನಾಗರಾಜ್ ಕಾಂಗ್ರೆಸ್ ಏಜೆಂಟ್ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಮ್ಯಾಗೆ ಟಾಂಗ್‌ ಕೊಟ್ಟ ಡಿಕೆ ಶಿವಕುಮಾರ್