Webdunia - Bharat's app for daily news and videos

Install App

ಸಿದ್ದರಾಮಯ್ಯ, ಕುಮಾರಸ್ವಾಮಿ ಲಿಂಬೆ ಹಣ್ಣು ಇಟ್ಟು ನೋಡಿ ರಾಜೀನಾಮೆ ನೀಡಲಿ

Webdunia
ಶನಿವಾರ, 25 ಮೇ 2019 (17:23 IST)
ಸಿದ್ದರಾಮಯ್ಯ ಗೆ ಮಾನ, ಮರ್ಯಾದೆ, ಗೌರವ ಇದ್ರೆ ರಾಜೀನಾಮೆ ಕೊಡಲಿ. ಕುಮಾರಸ್ವಾಮಿ ಗೆ ಕಿಂಚಿತ್ತು ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ. ಹೀಗಂತ ಬಿಜೆಪಿಯ ಮಾಜಿ ಡಿಸಿಎಂ ಆಗ್ರಹ ಮಾಡಿದ್ದಾರೆ.

ಮಾಜಿ ಡಿಸಿಎಂ ಆರ್.ಅಶೋಕ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಬಿಜೆಪಿ 25 ಸೀಟು ಪಡೆದಿದೆ. ಸಿದ್ದರಾಮಯ್ಯ ಗೆ ಸಮನ್ವಯತೆ ಇಲ್ಲದೆ ಸಮನ್ವಯ ಸಮಿತಿ ಅಧ್ಯಕ್ಷರಾದ್ರು. ರಾಮಕೃಷ್ಣ ಹೆಗಡೆ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡಾಗ ರಾಜೀನಾಮೆ ನೀಡಿದ್ದರು.

ಇವತ್ತೆ ಕರ್ನಾಟಕ ವಿಧಾನಸಭೆ ಚುನಾವಣೆ ನಡೆದ್ರೆ 177 ಸೀಟು ಗೆಲ್ಲುತ್ತೇವೆ. ಕಾರಣ ಲೋಕಸಭೆ ಚುನಾವಣೆಯಲ್ಲಿ 177  ವಿಧಾನಸಭೆ ಕ್ಷೇತ್ರದಲ್ಲಿ ಲೀಡ್ ಬಂದಿದೆ ಎಂದರು.

ಕಾಂಗ್ರೆಸ್ - ಜೆಡಿಎಸ್ ಮುಳುಗಿದ ಹಡಗು. ಒಂದು ವರ್ಷದ ಹಿಂದೆ ಮೈತ್ರಿ ಹಡಗು ರಮೇಶ್ ಜಾರಕಿಹೊಳಿ ಯಿಂದ ತೂತು ಬಿದ್ದಿತ್ತು. ಇವಾಗ ಮೈತ್ರಿ ಹಡಗು ಪೂರ್ತಿ ಮುಳುಗಿದೆ. ಚುನಾವಣೆ ಸಮಯದಲ್ಲಿ ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ ನರೇಂದ್ರ ಮೋದಿ ಅವ್ರನ್ನ ತೆಗಳಿದ್ರು. ಕಳ್ಳರು, ಸುಳ್ಳರು, ಜೈಲಿಗೆ ಹೋಗಿ ಬಂದವರು ಅಂತ ಹೇಳಿದ್ರು. ಇನ್ನಾದ್ರೂ ಬಿಎಸ್ ವೈ ಅವ್ರ ಬಗ್ಗೆ ಗೌರವ ಕೊಟ್ಟು ಮಾತನಾಡಲಿ ಎಂದರು.

ಲಿಂಬೆ ಹಣ್ಣು ಇಟ್ಟು ನೋಡಿ ರಾಜೀನಾಮೆ ನೀಡಲಿ ಎಂದು ಸಚಿವ ರೇವಣ್ಣ ವಿರುದ್ಧವೋ ಪರೋಕ್ಷ ವಾಗ್ದಾಳಿ ನಡೆಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments