ಅರವಿಂದ್ ಕೇಜ್ರಿವಾಲ್ ಮಾಡೆಲ್ ಫಾಲೋ ಮಾಡ್ತಾರಂತೆ ಸಿಎಂ ಸಿದ್ದರಾಮಯ್ಯ

Krishnaveni K
ಬುಧವಾರ, 25 ಸೆಪ್ಟಂಬರ್ 2024 (13:21 IST)
ಬೆಂಗಳೂರು: ಮುಡಾ ಹಗರಣದಲ್ಲಿಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಯಾದರೂ ಅವರು ದೆಹಲಿ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಮಾಡೆಲ್ ಫಾಲೋ ಮಾಡಲಿದ್ದಾರಂತೆ. ಈ ಬಗ್ಗೆ ಸತೀಶ್ ಜಾರಕಿಹೊಳಿ ಸುಳಿವು ನೀಡಿದ್ದಾರೆ.

ಸಿಎಂ ವಿರುದ್ಧ ಕೇಸ್ ದಾಖಲಿಸಿ, ಅವರನ್ನು ಬಂಧಿಸಬೇಕಾದ ಪರಿಸ್ಥಿತಿ ಬಂದರೂ ಅವರು ರಾಜೀನಾಮೆ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಅಂತಹ ಸಂದರ್ಭ ಬಂದಾಗ ಸಿದ್ದರಾಮಯ್ಯ ಕೂಡಾ ಕೇಜ್ರಿವಾಲ್ ರೀತಿ ಮಾಡ್ತಾರಾ ಎಂದು ಪತ್ರಕರ್ತರು ಸತೀಶ್ ಜಾರಕಿಹೊಳಿಗೆ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅವರು ‘ಕೇಜ್ರಿವಾಲ್ ಮಾಡೆಲ್ ಫಾಲೋ ಮಾಡಬಹುದೇನೋ. ಅದರ ಬಗ್ಗೆ ಏನೂ ಗೊತ್ತಿಲ್ಲ. ಸದ್ಯಕ್ಕೆ ರಾಜೀನಾಮೆ ಪ್ರಶ್ನೆ ಎಲ್ಲಾ ಬರಲ್ಲ. ಇನ್ನೂ ಎಫ್ ಐಆರ್ ದಾಖಲಾಗಬೇಕು, ತನಿಖೆಯಾಗಬೇಕು, ಈಗಲೇ ಏನೂ ಹೇಳಕ್ಕಾಗಲ್ಲ’ ಎಂದಿದ್ದಾರೆ.

ಈ ಮೊದಲು ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಒಳಗೊಳಗೇ ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸುತ್ತಿದ್ದಾಗ ಸತೀಶ್ ಜಾರಕಿಹೊಳಿ ಇದರ ನೇತೃತ್ವ ವಹಿಸಿದ್ದರು ಎಂಬ ಸುದ್ದಿ ಕೇಳಿಬಂದಿತ್ತು. ಇದೀಗ ಅವರು ಸಿದ್ದರಾಮಯ್ಯನವರ ಬಗ್ಗೆ ನೀಡಿರುವ ಹೇಳಿಕೆ ಮಹತ್ವದ್ದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments