Webdunia - Bharat's app for daily news and videos

Install App

ಕಿತ್ತೂರು ಉತ್ಸವದಲ್ಲಿ ದೀಪ ಬೆಳಗುವಾದ ಸಿದ್ದರಾಮಯ್ಯ ಶಲ್ಯಕ್ಕೆ ಬೆಂಕಿ: ಸಂಕಷ್ಟದ ಸೂಚನೆಯಾ (Video)

Krishnaveni K
ಬುಧವಾರ, 2 ಅಕ್ಟೋಬರ್ 2024 (12:37 IST)
Photo Credit: X
ಬೆಂಗಳೂರು: ಇಂದು ವಿಧಾನಸೌಧದ ಮುಂಭಾಗ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಶಲ್ಯಕ್ಕೆ ಬೆಂಕಿ ತಗುಲಿ ಅನಾಹುತ ಸಂಭವಿಸುವುದರಲ್ಲಿತ್ತು. ಇದು ಸಂಕಷ್ಟದ ಸೂಚನೆಯಾ ಎಂಬ ಅನುಮಾನ ಮೂಡಿದೆ.

ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಶಾಸಕ, ಸಚಿವರುಗಳೊಂದಿಗೆ ಕಿತ್ತೂರು ಉತ್ಸವದಲ್ಲಿ ಭಾಗಿಯಾದ ಸಿಎಂ ದೀಪ ಬೆಳಗಿದ್ದಾರೆ. ಆದರೆ ಅಷ್ಟರಲ್ಲಿ ಅವರ ಶಲ್ಯ ದೀಪಕ್ಕೆ ತಗುಲಿ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್ ಅಲ್ಲಿಯೇ ಇದ್ದ ಭದ್ರತಾ ಸಿಬ್ಬಂದಿಯ ಗಮನಕ್ಕೆ ಬಂದಿದೆ.

ತಕ್ಷಣವೇ ಅವರು ಬೆಂಕಿ ನಂದಿಸಿದ್ದಾರೆ. ಶಲ್ಯಕ್ಕೆ ಬೆಂಕಿ ತಗುಲಿದ್ದರಿಂದ ಅರೆಕ್ಷಣ ಸ್ವತಃ ಸಿದ್ದರಾಮಯ್ಯ ಕೊಂಚ ಗಲಿಬಿಲಿಯಾದರು. ಬಳಿಕ ಸಾವರಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಭದ್ರತಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ ಎನ್ನಬಹುದು.

ಇದೀಗ ಮುಡಾಹಗರಣ ವಿಚಾರವಾಗಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಲಾಗಿದೆ. ಇನ್ನೊಂದೆಡೆ ವಿಪಕ್ಷಗಳು ಅವರ ರಾಜೀನಾಮೆಗೆ ಪಟ್ಟು ಹಿಡಿದಿವೆ. ಇಷ್ಟು ವರ್ಷದ ರಾಜಕೀಯ ಜೀವನದಲ್ಲಿ ಕಳಂಕವೇ ಇಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯಗೆ ಈಗ ಒಂದಾದ ಮೇಲೊಂದರಂತೆ ಎದುರಾಗುತ್ತಿರುವ ಸಂಕಷ್ಟಗಳ ಸೂಚನೆಯಾ ಇದು ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments