ಕಿತ್ತೂರು ಉತ್ಸವದಲ್ಲಿ ದೀಪ ಬೆಳಗುವಾದ ಸಿದ್ದರಾಮಯ್ಯ ಶಲ್ಯಕ್ಕೆ ಬೆಂಕಿ: ಸಂಕಷ್ಟದ ಸೂಚನೆಯಾ (Video)

Krishnaveni K
ಬುಧವಾರ, 2 ಅಕ್ಟೋಬರ್ 2024 (12:37 IST)
Photo Credit: X
ಬೆಂಗಳೂರು: ಇಂದು ವಿಧಾನಸೌಧದ ಮುಂಭಾಗ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಶಲ್ಯಕ್ಕೆ ಬೆಂಕಿ ತಗುಲಿ ಅನಾಹುತ ಸಂಭವಿಸುವುದರಲ್ಲಿತ್ತು. ಇದು ಸಂಕಷ್ಟದ ಸೂಚನೆಯಾ ಎಂಬ ಅನುಮಾನ ಮೂಡಿದೆ.

ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಶಾಸಕ, ಸಚಿವರುಗಳೊಂದಿಗೆ ಕಿತ್ತೂರು ಉತ್ಸವದಲ್ಲಿ ಭಾಗಿಯಾದ ಸಿಎಂ ದೀಪ ಬೆಳಗಿದ್ದಾರೆ. ಆದರೆ ಅಷ್ಟರಲ್ಲಿ ಅವರ ಶಲ್ಯ ದೀಪಕ್ಕೆ ತಗುಲಿ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್ ಅಲ್ಲಿಯೇ ಇದ್ದ ಭದ್ರತಾ ಸಿಬ್ಬಂದಿಯ ಗಮನಕ್ಕೆ ಬಂದಿದೆ.

ತಕ್ಷಣವೇ ಅವರು ಬೆಂಕಿ ನಂದಿಸಿದ್ದಾರೆ. ಶಲ್ಯಕ್ಕೆ ಬೆಂಕಿ ತಗುಲಿದ್ದರಿಂದ ಅರೆಕ್ಷಣ ಸ್ವತಃ ಸಿದ್ದರಾಮಯ್ಯ ಕೊಂಚ ಗಲಿಬಿಲಿಯಾದರು. ಬಳಿಕ ಸಾವರಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಭದ್ರತಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ ಎನ್ನಬಹುದು.

ಇದೀಗ ಮುಡಾಹಗರಣ ವಿಚಾರವಾಗಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಲಾಗಿದೆ. ಇನ್ನೊಂದೆಡೆ ವಿಪಕ್ಷಗಳು ಅವರ ರಾಜೀನಾಮೆಗೆ ಪಟ್ಟು ಹಿಡಿದಿವೆ. ಇಷ್ಟು ವರ್ಷದ ರಾಜಕೀಯ ಜೀವನದಲ್ಲಿ ಕಳಂಕವೇ ಇಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯಗೆ ಈಗ ಒಂದಾದ ಮೇಲೊಂದರಂತೆ ಎದುರಾಗುತ್ತಿರುವ ಸಂಕಷ್ಟಗಳ ಸೂಚನೆಯಾ ಇದು ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಡ ಅನ್ನಕ್ಕಾಯ್ತದಾ.. ಡಿನ್ನರ್ ಮೀಟಿಂಗ್ ಬಗ್ಗೆ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ ಪಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುಲು ಕೊನೆ ದಿನಾಂಕ, ಹೇಗೆ ನೋಡಿ

ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಶಾಕಿಂಗ್ ಪ್ರತಿಕ್ರಿಯೆ

ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ

ಸಿದ್ದರಾಮಯ್ಯ ಬಣಕ್ಕೆ ಸೆಡ್ಡು ಹೊಡೆಯಲು ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಮುಂದಿನ ಸುದ್ದಿ
Show comments