Webdunia - Bharat's app for daily news and videos

Install App

ಸಿದ್ದರಾಮಯ್ಯ ಮುಡಾ ಕೇಸ್ ಮುಯ್ಯಿಗೆ ಮುಯ್ಯಿ: ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಕೇಸ್‌ಗೂ ಮರು ಜೀವ

Sampriya
ಗುರುವಾರ, 22 ಆಗಸ್ಟ್ 2024 (20:11 IST)
Photo Courtesy X
ಬೆಂಗಳೂರು:  ರಾಜ್ಯಪಾಲರ ಬಳಿ ಹೆಚ್.ಡಿ.ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ಮತ್ತು ಮುರುಗೇಶ ನಿರಾಣಿ ಅವರ ಕುರಿತಾಗಿ ಅನುಮೋದನೆಗಾಗಿ ಬಾಕಿಯಿರುವ ವಿಷಯಗಳಲ್ಲಿ ಶೀಘ್ರ ತೀರ್ಮಾನ ಕೈಗೊಳ್ಳಲು ಹಾಗೂ ನ್ಯಾಯದ ಪ್ರಕ್ರಿಯೆಯನ್ನು ಸುಗಮಗೊಳಿಸಲು ರಾಜ್ಯಪಾಲರಿಗೆ ಸಂವಿಧಾನದ 163 ನೇ ವಿಧಿಯನ್ವಯ ನೆರವು ಮತ್ತು ಸಲಹೆ ನೀಡಲು ಇಂದು ನಡೆದ ಸಚಿವ ಸಂಪುಟ ತನ್ನ ಅನುಮೋದನೆ ನೀಡಿದೆ ಎಂದು ಕಾನೂನು ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್‌ ಅವರು ತಿಳಿಸಿದರು.

ಸಂವಿಧಾನದ 163 ವಿಧಿ ಅನ್ವಯ ವಿಧಿ, ರಾಜ್ಯಪಾಲರಿಗೆ ನೆರವು ಮತ್ತು ಸಲಹೆ ನೀಡಲು ಸಚಿವ ಸಂಪುಟಕ್ಕೆ ಅವಕಾಶವಿದೆ. ಅದರಂತೆ ಈ ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಸಲಹೆಗಳನ್ನು ರಾಜ್ಯಪಾಲರಿಗೆ ಸಲ್ಲಿಸಲಾಗುವುದು.

ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿರುವ ಹಲವು ಅನುಮೋದನಾ ಅರ್ಜಿಗಳು ರಾಜ್ಯಪಾಲರ ಬಳಿ ಬಾಕಿ ಉಳಿದಿದೆ. ಈ ಅರ್ಜಿಗಳ ತನಿಖೆ ಬಳಿಕ ಕೆಲವು ಪ್ರಕರಣಗಳಲ್ಲಿ ಆರೋಪ ಪಟ್ಟಿಗಳನ್ನು ಸಲ್ಲಿಸಲಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ ಪಿಸಿ ಆಕ್ಟ್‌ ಸೆಕ್ಷನ್‌ ಹಾಗೂ ವಿವಿಧ ಕಾಯ್ದೆಗಳ ಅಡಿಯಲ್ಲಿ ಅನುಮೋದನೆಗಾಗಿ ಕೋರಲಾಗಿದೆ. ಕೆಲವು ಅರ್ಜಿಗಳು ಪಿಸಿ ಆಕ್ಟ್‌ ಸೆಕ್ಷನ್‌ 17 ಎ ಅಡಿಯಲ್ಲಿ ಪೂರ್ವಾನುಮೋದನೆಗಾಗಿ ರಾಜ್ಯಪಾಲರ ಬಳಿ ಬಾಕಿಯಿದೆ.

ಶಶಿಕಲಾ ಜೊಲ್ಲೆ ಅವರ ಪ್ರಕರಣದಲ್ಲಿ ದಿನಾಂಕ  9- 12- 2021 ರಂದು ಲೋಕಾಯುಕ್ತ ಪೊಲೀಸರು ಪಿಸಿ ಆಕ್ಟ್‌ 17 ಎ ಅಡಿಯಲ್ಲಿ ಪೂರ್ವಾನುಮೋದನೆಯನ್ನು ಕೋರಿದ್ದರು. ಮುರುಗೇಶ್‌ ನಿರಾಣಿ  ಪ್ರಕರಣದಲ್ಲಿ ಸಹ ಇದೇ ಕಾಯ್ದೆಯಡಿಯಲ್ಲಿ ದಿನಾಂಕ 26-2-24 ಪೂರ್ವಾನುಮೋದನೆ ಕೋರಲಾಗಿದೆ. ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ದಿನಾಂಕ  21- 11- 2023 ರಂದು ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್‌ 19  ಮತ್ತು ಸಿಆರ್‌ಪಿಸಿ 197 ಅಡಿಯಲ್ಲಿ ಅನುಮೋದನೆ ಕೋರಲಾಗಿತ್ತು. ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ ಸಲ್ಲಿಸಿದ ಆರೋಪ ಪಟ್ಟಿ ಕುರಿತು ರಾಜ್ಯಪಾಲರು ದಿನಾಂಕ 29-7-24 ರಂದು ಸ್ಪಷ್ಟೀಕರಣ ಕೇಳಿದ್ದರು. ಇದಕ್ಕೆ ಎಸ್‌ಐಟಿ ದಿನಾಂಕ 16- 8 -24 ರಂದು ರಾಜ್ಯಪಾಲರಿಗೆ ಅಗತ್ಯ ಸ್ಪಷ್ಟೀಕರಣ ನೀಡಿದೆ. ಜನಾರ್ಧನ  ರೆಡ್ಡಿ ಪ್ರಕರಣದಲ್ಲಿ ದಿನಾಂಕ 13- 5- 24ರಂದು  ಅನುಮೋದನೆಗಾಗಿ ಸಲ್ಲಿಸಲಾಗಿದೆ.  ಕುಮಾರಸ್ವಾಮಿ ಮತ್ತು ಜನಾರ್ಧನ ರೆಡ್ಡಿ ಪ್ರಕರಣಗಳಲ್ಲಿ  ಆರೋಪ ಪಟ್ಟಿಯನ್ನು ಸಹ  ಸಲ್ಲಿಸಲಾಗಿದೆ.
ರಾಜ್ಯಪಾಲರು ಸಚಿವ ಸಂಪುಟದ ಸಲಹೆಯನ್ನು ಸ್ವೀಕರಿಸಲು ಬಾಧ್ಯಸ್ಥರಾಗಿದ್ದು, ಈ ವಿಷಯದಲ್ಲಿ ರಾಜ್ಯಪಾಲರು ತಮ್ಮ ವಿವೇಚನೆಯನ್ನು ನ್ಯಾಯಯುತವಾಗಿ ಬಳಸಿಕೊಳ್ಳುವ ವಿಶ್ವಾಸವಿದೆ ಎಂದರು.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ವ್ಯಕ್ತಿ ರಾಜ್ಯಪಾಲರಿಗೆ ದೂರು ನೀಡಿದ್ದು, ತರಾತುರಿಯಲ್ಲಿ ಸಂಜೆಯೊಳಗಾಗಿ ಶೋಕಾಸು ನೋಟೀಸು ನೀಡಲಾಗಿದೆ. ಆದರೆ ಈ ನಾಲ್ಕು ಪ್ರಕರಣಗಳು ಭಿನ್ನವಾಗಿದ್ದು, ಎಲ್ಲಾ ಪ್ರಕ್ರಿಯೆಗಳು ಮುಗಿದರೂ ರಾಜ್ಯಪಾಲರು ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಸಾರ್ವಜನಿಕರ ದೃಷ್ಟಿಯಲ್ಲಿ ರಾಜ್ಯಪಾಲರ ಕಚೇರಿ ಬಗ್ಗೆ ತಪ್ಪು ಭಾವನೆ ಬರಬಾರದು ಮತ್ತು ಯಾವುದೇ ಗೊಂದಲ ಆಗಬಾರದೆಂದು ಸಚಿವ ಸಂಪುಟ ನೆರವು ಮತ್ತು ಸಲಹೆ ನೀಡಲು ನಿರ್ಧರಿಸಿದೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

ಮುಂದಿನ ಸುದ್ದಿ
Show comments