Webdunia - Bharat's app for daily news and videos

Install App

ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯಗೆ ಇಂದು ಕೋರ್ಟ್ ತೀರ್ಪಿನ ಢವ ಢವ

Krishnaveni K
ಗುರುವಾರ, 18 ಡಿಸೆಂಬರ್ 2025 (09:45 IST)
ಬೆಂಗಳೂರು: ಅನಾರೋಗ್ಯದ ನಡುವೆಯೂ ಸಿಎಂ ಸಿದ್ದರಾಮಯ್ಯಗೆ ಇಂದು ಕೋರ್ಟ್ ತೀರ್ಪಿನ ಆತಂಕ ಎದುರಾಗಿದೆ. ಮುಡಾ ಕೇಸ್ ನಲ್ಲಿ ಇಂದು ಕೋರ್ಟ್ ಮಹತ್ವದ ತೀರ್ಪು ನೀಡಲಿದೆ.

ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪಗಳಿಗೆ ಹುರುಳಿಲ್ಲ ಎಂದು ಲೋಕಾಯುಕ್ತರು ಬಿ ರಿಪೋರ್ಟ್ ಸಲ್ಲಿಸಿದ್ದರು. ಇದರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು.

ಅದರ ವಿಚಾರಣೆಯನ್ನು ಮುಗಿಸಿರುವ ನ್ಯಾಯಾಲಯ ಇಂದಿಗೆ ತೀರ್ಪು ಕಾಯ್ದಿರಿಸಿದೆ. ಒಂದು  ವೇಳೆ ನ್ಯಾಯಾಲಯ ಲೋಕಾಯುಕ್ತ ವರದಿಯನ್ನು ತಳ್ಳಿ ಹಾಕಿದರೆ ಸಿಎಂ ವಿರುದ್ಧ ಮತ್ತೆ ತನಿಖೆ ನಡೆಯಲಿದೆ. ಇಲ್ಲದೇ ಹೋದರೆ ಸಿಎಂಗೆ ಬಿಗ್ ರಿಲೀಫ್ ಸಿಕ್ಕಂತಾಗುವುದು.

ಸಿದ್ದರಾಮಯ್ಯನವರ ಪತ್ನಿ ಹೆಸರಿನಲ್ಲಿ 14 ಮುಡಾ ಸೈಟ್ ಅಕ್ರಮವಾಗಿ ಪಡೆಯಲಾಗಿತ್ತು ಎಂಬುದು ಆರೋಪವಾಗಿದೆ. ಈ ಪ್ರಕರಣವನ್ನು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು. ಆದರೆ ರಾಜ್ಯ ಸರ್ಕಾರದ ಅಧೀನದಲ್ಲೇ ಇರುವ ಸಂಸ್ಥೆ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿದ್ದರ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಮುಂದಿನ ಸುದ್ದಿ
Show comments