Webdunia - Bharat's app for daily news and videos

Install App

ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿವಾದ: ರಾತ್ರೋ ರಾತ್ರಿ ಪ್ರಿನ್ಸೆಸ್ ಸ್ಟಿಕ್ಕರ್ ನಾಪತ್ತೆ

Krishnaveni K
ಗುರುವಾರ, 2 ಜನವರಿ 2025 (10:54 IST)
ಮೈಸೂರು: ಇಲ್ಲಿನ ಕೆಆರ್ ಎಸ್ ರಸ್ತೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ನಾಮಕರಣ ಮಾಡುವ ವಿವಾದ ತಾರಕಕ್ಕೇರಿದೆ. ರಸ್ತೆಗೆ ಪ್ರಿನ್ಸೆಸ್ ಎಂದು ನಾಮಕರಣ ಮಾಡಿದ್ದ ಸ್ಟಿಕ್ಕರ್ ನ್ನು ಯಾರೋ ರಾತ್ರೊ ರಾತ್ರಿ ಎತ್ತಂಗಡಿ ಮಾಡಿದ್ದಾರೆ.

ಮೈಸೂರಿನ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವುದನ್ನು ಕೆಲವು ಸಂಘಟನೆಗಳು ಮತ್ತು ಬಿಜೆಪಿ ವಿರೋಧಿಸುತ್ತಲೇ ಇದೆ. ಮುಡಾ ಹಗರಣದಲ್ಲಿ ಕಳಂಕಿತರಾಗಿರುವ ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಡುವುದು ಸರಿಯಲ್ಲ ಎಂಬುದು ಬಿಜೆಪಿ ಮತ್ತು ಸಂಘಟನೆಗಳ ವಾದವಾಗಿದೆ.

ಈ ನಡುವೆ ಈ ರಸ್ತೆಯಲ್ಲಿ ಕೆಲವು ಭಾಗಗಳಲ್ಲಿ ನಿನ್ನೆ ಪ್ರಿನ್ಸೆಸ್ ಎಂದು ಸ್ಟಿಕ್ಕರ್ ಅಂಟಿಸಿದ್ದರು. ಆದರೆ ರಾತ್ರೋ ರಾತ್ರಿ ಸ್ಟಿಕ್ಕರ್ ತೆರವುಗಳಿಸಲಾಗಿದೆ. ಸ್ಟಿಕ್ಕರ್ ಕಿತ್ತು ಹಾಕಿರುವುದು ಯಾರು ಎಂಬ ಬಗ್ಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ.

ಮೈಸೂರಿಗೆ ಸಿದ್ದರಾಮಯ್ಯ ಅನೇಕ ಕೊಡುಗೆ ನೀಡಿದ್ದಾರೆ. ಹೀಗಾಗಿ ಅವರ ಹೆಸರು ಇಡುವುದರಲ್ಲಿ ತಪ್ಪೇನು ಎಂಬುದು ಕಾಂಗ್ರೆಸ್ ವಾದವಾಗಿದೆ. ಆದರೆ ಅದನ್ನು ವಿರೋಧಿಸಿ ಕೆಲವು ಸಂಘಟನೆಗಳು ಪ್ರಿನ್ಸೆಸ್ ಸ್ಟಿಕ್ಕರ್ ಅಂಟಿಸಿ ಪೂಜೆಯನ್ನೂ ಮಾಡಿದ್ದರು. ಆದರೆ ಈಗ ಸ್ಟಿಕ್ಕರ್ ತೆರವುಗೊಳಿಸಿರುವುದು ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments