Webdunia - Bharat's app for daily news and videos

Install App

'ಡಿಕೆ ಶಿವಕುಮಾರ್ ಜೈಲಿಂದ ಬಂದಿದ್ದು ಸಿದ್ದರಾಮಯ್ಯಗೆ ಸಮಾಧಾನವಿಲ್ಲ'

Webdunia
ಮಂಗಳವಾರ, 5 ನವೆಂಬರ್ 2019 (17:09 IST)
ಜೈಲಿಂದ ಡಿಕೆ ಶಿವಕುಮಾರ್ ಬೇಗ ಹೊರ ಬಂದಿರೋದಕ್ಕೆ ಸಿದ್ದರಾಮಯ್ಯಗೆ ಸಮಾಧಾನವಿಲ್ಲ.
ಹೀಗಂತ ಸಚಿವರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ.

ಚಿತ್ರದುರ್ಗದಲ್ಲಿ ಆರೋಗ್ಯ ಮಂತ್ರಿ ಶ್ರೀರಾ‌ಮುಲು ಹೇಳಿಕೆ ನೀಡಿದ್ದು, ಆಡಿಯೋ ಲೀಕ್ ವಿಚಾರ ರಾಜ್ಯದಲ್ಲಿ ಬಹಳಷ್ಟು ಚರ್ಚೆ ಆಗುತ್ತಿದೆ. ಮೂಲವಾಗಿ ಲೀಕ್ ಯಾರು ಮಾಡಿದ್ದಾರೆ ಎಂದು ಹೊರ ಬರಬೇಕಿದೆ.
ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನ ಕೆಳಗಿಸಿ ಮುಂದೆ ಸಾಗುವವರು ಯಾರು ಇಲ್ಲ. ಆಡಿಯೋ, ವಿಡಿಯೋ ಕ್ಲೀಪ್ ನಕಲಿ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದ್ರು.

ಬಿಎಸ್ ವೈ ಒಪ್ಪಿಕೊಂಡಿರುವ ಒಪ್ಪದಿರುವ ಬಗ್ಗೆ ನಾನು ಮಾತನಾಡಲ್ಲ. ಅನೇಕ ಷಡ್ಯಂತ್ರಗಳು ಬಿಎಸ್ ವೈ ವಿರುದ್ಧ ನಡೆದಿವೆ. ಎಲ್ಲಾ ವಿಚಾರ ಹೈಕಮಾಂಡ್ ಸೂಕ್ಷ್ಮವಾಗಿ ನೋಡುತ್ತಿದೆ. ಈ ವಿಚಾರದಲ್ಲಿ ಕೆಲವೇ ದಿನಗಳಲ್ಲಿ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದ್ರು.

ಸಿದ್ದರಾಮಯ್ಯನವರಿಗೆ ಜಗಳ ಹಚ್ಚಿ ತಲೆಯಲ್ಲಿ ಹುಳ ಬಿಡಬೇಕೆಂದುಕೊಂಡಿದ್ದಾರೆ. ಹೀಗಾಗಿ ಬೊಮ್ಮಾಯಿ, ಸವದಿ ತಲೆಯಲ್ಲಿ ಹುಳ ಬಿಟ್ಟು ಜಗಳ ಆಗಬಹುದು ಎಂದುಕೊಂಡಿದ್ದಾರೆ. ನಮ್ಮ ಪಕ್ಷದಲ್ಲಿ ಆ ರೀತಿ ಇಲ್ಲ ಎಂದ್ರು.  

ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಜೈಲಿನಲ್ಲಿ ಇರುತ್ತಾರೆ ಎಂದು ಭಾವಿಸಿದ್ದರು. ಹೀಗಾಗಿ ಕ್ಯಾಂಡಿಡೇಟ್ ಗಳನ್ನ ಪಟ್ ಅಂತ ಘೋಷಿಸಿದರು. ಜೈಲಿಂದ ಡಿಕೆ ಶಿವಕುಮಾರ್ ಬೇಗ ಬಂದಿದ್ದು, ಸಿದ್ದರಾಮಯ್ಯಗೆ ಸಮಾಧಾನವಿಲ್ಲ ಎಂದು ದೂರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

Karnataka Weather: ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ತಪ್ಪದೇ ಗಮನಿಸಿ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಮುಂದಿನ ಸುದ್ದಿ
Show comments