Webdunia - Bharat's app for daily news and videos

Install App

ಬಿಜೆಪಿ ಸರ್ಕಾರವಿದ್ದಾಗ ಜಿಂದಾಲ್ ಗೆ ಭೂಮಿ ಕೊಡುವುದನ್ನು ವಿರೋಧಿಸಿದ್ದ ಸಿದ್ದರಾಮಯ್ಯ ಈಗ ತಾವೇ 3 ಸಾವಿರ ಎಕರೆ ಕೊಡಲು ಒಪ್ಪಿಗೆ

Krishnaveni K
ಶುಕ್ರವಾರ, 23 ಆಗಸ್ಟ್ 2024 (10:09 IST)
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ಜಿಂದಾಲ್ ಸಂಸ್ಥೆಗೆ ಭೂಮಿ ಕೊಡುವುದನ್ನು ವಿರೋಧಿಸಿದ್ದ ಸಿಎಂ ಸಿದ್ದರಾಮಯ್ಯ ಇಂದು ತಾವೇ ಬರೋಬ್ಬರಿ 3 ಸಾವಿರಕ್ಕೂ ಹೆಚ್ಚು ಎಕರೆ ಭೂಮಿಯನ್ನು ಕೊಡುವುದಕ್ಕೆ ಒಪ್ಪಿಗೆ ನೀಡಿದ್ದಾರೆ.

ಹಿಂದೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವಿದ್ದಾಗ ಮತ್ತು ಅದಾದ ಬಳಿಕ ಬಿಜೆಪಿ ಸರ್ಕಾರವಿದ್ದಾಗ ಜಿಂದಾಲ್ ಗೆ ಭೂಮಿ ನೀಡುವ ಪ್ರಸ್ತಾಪ ಬಂದಿತ್ತು. ಆಗ ಪ್ರತಿಪಕ್ಷ ನಾಯಕರಾಗಿದ್ದ ಇದೇ ಸಿದ್ದರಾಮಯ್ಯ ಮತ್ತು ಎಚ್ ಕೆ ಪಾಟೀಲ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಇದರಿಂದಾಗಿ ಯೋಜನೆ ನೆನಗುದಿಗೆ ಬಿದ್ದಿತ್ತು. ವಿಶೇಷವೆಂದರೆ ಇದೀಗ ಅದೇ ಸಿದ್ದರಾಮಯ್ಯ ಸರ್ಕಾರವೇ ಜಿಂದಾಲ್ ಯೋಜನೆಗೆ ಅಸ್ತು ಎಂದಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್ ಗೆ ಭೂಮಿ ನೀಡಲು ಅನುಮೋದನೆ ನೀಡಲಾಗಿದೆ. ಪ್ರತೀ ಎಕರೆಗೆ 1.50 ಲಕ್ಷ ರೂ.ನಂತೆ ಒಟ್ಟು 3,667 ಎಕರೆ ಭೂಮಿ ನೀಡಲು ಒಪ್ಪಿಗೆ ನೀಡಲಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ಸಮೀಪ ಭೂಮಿ ನೀಡಲಾಗಿದೆ.

2019 ರಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರವಿದ್ದಾಗ ಜಿಂದಾಲ್ ಗೆ ಭೂಮಿ ಹಸ್ತಾಂತರಿಸಲು ಮುಂದಾದಾಗ ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ, ಎಚ್ ಕೆ ಪಾಟೀಲ್ ಸೇರಿದಂತೆ ಕೆಲವು ನಾಯಕರು ಬಲವಾಗಿ ವಿರೋಧಿಸಿದ್ದರು. ಈ ಸಂಬಂಧ ಧರಣಿಗಳೂ ನಡೆದಿದ್ದವು. ಈಗ ಅದೇ ಜಾಗವನ್ನು ಜಿಂದಾಲ್ ಗೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments