Select Your Language

Notifications

webdunia
webdunia
webdunia
webdunia

ಬಿಎಸ್‌ವೈರನ್ನು ಬಂಧಿಸಲು ಸಿಎಂ ಸಿದ್ದರಾಮಯ್ಯ ಸಂಚು: ಶೆಟ್ಟರ್

ಬಿಎಸ್‌ವೈರನ್ನು ಬಂಧಿಸಲು ಸಿಎಂ ಸಿದ್ದರಾಮಯ್ಯ ಸಂಚು: ಶೆಟ್ಟರ್
ಬೆಂಗಳೂರು , ಸೋಮವಾರ, 9 ಅಕ್ಟೋಬರ್ 2017 (15:37 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಬಂಧಿಸಲು ಸಿಎಂ ಸಿದ್ದರಾಮಯ್ಯ ಸಂಚು ರೂಪಿಸಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಕೇವಲ 15 ದಿನಗಳಲ್ಲಿ ಫೋರೆನ್ಸಿಕ್ ವರದಿಯನ್ನು ತರಿಸಿಕೊಂಡು ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಎಸಿಬಿಯಲ್ಲಿ ಸಿಎಂ ವಿರುದ್ಧ 18 ದೂರುಗಳು ದಾಖಲಾಗಿವೆ. ಯಾವುದೇ ದೂರಿನ ಬಗ್ಗೆ ಇಲ್ಲಿಯವರೆಗೆ ತನಿಖೆಯಾಗಿಲ್ಲ. ವಿಪಕ್ಷಗಳ ನಾಯಕರ ವಿರುದ್ಧ ದೂರು ದಾಖಲಿಸಿ ಎಸಿಬಿ ಮೂಲಕ ನಿಯಂತ್ರಿಸಬೇಕು ಎನ್ನುವ ಸಂಚು ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಬಿಜೆಪಿಯ ಎಲ್ಲಾ ನಾಯಕರ ವಿರುದ್ಧ ದೂರುಗಳು ದಾಖಲಿಸುವ ಪ್ರಯತ್ನ ನಡೆದಿದೆ. ನನ್ನ ವಿರುದ್ಧ ಯಾವುದೇ ಆರೋಪಗಳಿಲ್ಲವಾದ್ದರಿಂದ ನನ್ನ ವಿರುದ್ಧ ದೂರು ದಾಖಲಿಸಿಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಟೀಕೆಗಳೆನ್ನುವ ವಿಷವನ್ನು ಕುಡಿದು ಅರಗಿಸಿಕೊಳ್ಳುವ ಶಕ್ತಿಯಿದೆ: ಪ್ರಧಾನಿ ಮೋದಿ