Webdunia - Bharat's app for daily news and videos

Install App

ಸರ್ಕಾರ ರಚನೆಯಲ್ಲಿ ಇರುವ ಆಸಕ್ತಿ ಸಂಪುಟ ರಚನೆಯಲ್ಲಿ ಯಾಕಿಲ್ಲ?-ಸಿಎಂ ಗೆ ಸಿದ್ದರಾಮಯ್ಯ ಪ್ರಶ್ನೆ

Webdunia
ಶನಿವಾರ, 3 ಆಗಸ್ಟ್ 2019 (10:36 IST)
ಬೆಂಗಳೂರು : ಬಿಜೆಪಿ ಸರ್ಕಾರದ ಸಚಿವ ಸಂಪುಟ ಇನ್ನು ರಚನೆಯಾಗದ ಹಿನ್ನಲೆಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಇದ್ದ ಆತುರ ಸಚಿವ ಸಂಪುಟ ಮಾಡಲು ಏಕೆ ಅವಸರ  ತೋರುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಅವರು ಸಿಎಂ ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅತಿವೃಷ್ಟಿ, ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ , ಕೃಷಿ, ಗ್ರಾಮೀಣ ಅಭಿವೃದ್ಧಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ? ಸಚಿವ ಸಂಪುಟ ವಿಸ್ತರಣೆಯದ್ದೆ? ಎಂದು ಅವರು  ಪ್ರಶ್ನಿಸಿದ್ದಾರೆ.


ಹಾಗೇ ಟ್ವೀಟರ್ ನಲ್ಲಿ ರಾಜ್ಯಪಾಲರ ಕ್ರಮದ ಬಗ್ಗೆ ಪ್ರಶ್ನಿಸಿದ ಸಿದ್ದರಾಮಯ್ಯ, ವಿಶ್ವಾಸ ಮತಯಾಚನೆ ಮಾಡಲು ಸಂದೇಶದ ಮೇಲೆ ಸಂದೇಶ ಸದನಕ್ಕೆ ಕಳುಹಿಸುತ್ತಿದ್ದರಲ್ಲವೇ? ಆದರೆ ಈಗ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ ತರುತ್ತೇನೆ. ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದ ಏನಾಗುತ್ತಿದೆ? ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ? ಎಂದು ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments