Webdunia - Bharat's app for daily news and videos

Install App

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Krishnaveni K
ಶುಕ್ರವಾರ, 6 ಜೂನ್ 2025 (12:28 IST)
ಬೆಂಗಳೂರು: ಚಿನ್ನಸ್ವಾಮಿಯಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಹೊಣೆ ಹೊತ್ತು ಪೊಲೀಸರನ್ನು ಸಸ್ಪೆಂಡ್ ಮಾಡುವುದಲ್ಲ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು ಎಂದು ವಿಪಕ್ಷಗಳು ಹೇಳುತ್ತಿವೆ ಎಂದಿದ್ದಕ್ಕೆ ಸಿದ್ದು ಪ್ರತಿಕ್ರಿಯೆ ಹೇಗಿತ್ತು ಗೊತ್ತಾ?

ಆರ್ ಸಿಬಿ ಆಟಗಾರರನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿ ಚಿನ್ನಸ್ವಾಮಿ ಮೈದಾನ ಬಳಿ ದುರಂತವೇ ನಡೆದು ಹೋಗಿದೆ. ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಸಿಎಂ ಸಿದ್ದರಾಮಯ್ಯ ನಗರ ಪೊಲೀಸ್ ಕಮಿಷನರ್ ಬಿ ದಯಾನಂದ ಸೇರಿದಂತೆ ಪ್ರಮುಖ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ.

ಇಂದು ಪತ್ರಿಕಾಗೋಷ್ಠಿ ನಡೆಸಿದ್ದ ಎಚ್ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರು ಘಟನೆಯ ಹೊಣೆ ಹೊತ್ತು ಪೊಲೀಸರನ್ನು ಸಸ್ಪೆಂಡ್ ಮಾಡುವುದಲ್ಲ. ಸಿಎಂ ಮತ್ತು ಡಿಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದಿದ್ದರು.

ಇದರ ಬಗ್ಗೆ ಇಂದು ಮಾಧ್ಯಮಗಳು ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯ ‘ಬಿಜೆಪಿಯವರು ರಾಜಕೀಯಕ್ಕೋಸ್ಕರ ಮಾತನಾಡುತ್ತಾರೆ. ನಾನು ರಾಜಕೀಯ ಮಾಡಕ್ಕೆ ಹೋಗಲ್ಲ ಈಗ. ಮೇಲ್ನೋಟಕ್ಕೆ ಯಾರು ಜವಾಬ್ಧಾರರಿದ್ದಾರೆ, ಯಾರು ಜವಾಬ್ಧಾರಿಯನ್ನು ನಿಭಾಯಿಸಿಲ್ಲ ಅವರ ಮೇಲೆ ಕ್ರಮ ಕೈಗೊಂಡಿದ್ದೇವೆ’ ಎಂದು ಸಿಎಂ ಸಿದ್ದರಾಮಯ್ಯ ಹೆಚ್ಚು ಪ್ರತಿಕ್ರಿಯೆ ನೀಡದೇ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments