Select Your Language

Notifications

webdunia
webdunia
webdunia
webdunia

ವಿದೇಶಿ ಪ್ರವಾಸ ನಿರಾಕರಿಸಿದ ಸಿದ್ದರಾಮಯ್ಯ

ವಿದೇಶಿ ಪ್ರವಾಸ ನಿರಾಕರಿಸಿದ ಸಿದ್ದರಾಮಯ್ಯ
ಬೆಂಗಳೂರು , ಸೋಮವಾರ, 4 ಮೇ 2015 (16:04 IST)
ಕೈಗಾರಿಕೋದ್ಯಮಿಗಳನ್ನು ರಾಜ್ಯದತ್ತ ಸೆಳೆಯುವ ಸಲುವಾಗಿ ರಾಜ್ಯ ಸರ್ಕಾರ ಕೈಗೊಂಡಿದ್ದ ವಿದೇಶಿ ಪ್ರವಾಸಕ್ಕೆ ತೆರಳಲು ಸಿಎಂ ಸಿದ್ದರಾಮಯ್ಯ ಅವರು ಇಂದು ನಿರಾಕರಿಸಿದ್ದಾರೆ.

ಸಿಎಂ ನೇತೃತ್ವದಲ್ಲಿ ಕೈಗೊಳ್ಳಲಾಗಿದ್ದ ಈ ವಿದೇಶಿ ಪ್ರವಾಸದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸರ್ಕಾರ ಮುಖ್ಯ ಕಾರ್ಯದರ್ಶಿ ಹಾಗೂ ಕೈಗಾರಿಕಾ ಇಲಾಖೆಯ ಉನ್ನತಾಧಿಕಾರಿಗಳು ತೆರಳಲು ತೀರ್ಮಾನಿಸಲಾಗಿತ್ತು. ಆದರೆ ಸ್ಥಳೀಯ ಸರ್ಕಾರಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿದೇಶಿ ಪ್ರವಾಸಕ್ಕೆ ತರಳದಿರಲು ನಿರ್ಧರಿಸಿದ್ದಾರೆ.  

ಸಿಎಂ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ನರಸಿಂಹ ರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ, ಕೈಗಾರಿಕಾ ಇಲಾಖೆ ಆಯುಕ್ತ ಗೌರವ್ ಗುಪ್ತಾ ಹಾಗೂ ಪ್ರಧಾನ ಕಾರ್ಯದರ್ಶಿ ರತ್ನ ಪ್ರಭಾ ಸೇರಿದಂತೆ ಇತರೆ ಉನ್ನತಾಧಿಕಾರಿಗಳು ವಿದೇಶಿ ಪ್ರವಾಸ ತಂಡದಲ್ಲಿದ್ದು, ಮೇ 5ರಂದು ತೆರಳಲಿದ್ದಾರೆ. ಈ ತಂಡವು ಫ್ರಾನ್ಸ್ ಹಾಗೂ ಸ್ವೀಡನ್ ದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳನ್ನು ಆಕರ್ಷಿಸಲಿದೆ.

Share this Story:

Follow Webdunia kannada