Webdunia - Bharat's app for daily news and videos

Install App

ಅಲುಗಾಡುತ್ತಿರುವ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಮಾಡುತ್ತಿರುವ ಡ್ರಾಮಾ: ಜೆಡಿಎಸ್‌

Sampriya
ಸೋಮವಾರ, 14 ಏಪ್ರಿಲ್ 2025 (17:24 IST)
Photo Credit X
ಬೆಂಗಳೂರು: ಒಡೆದು ಅಳುವ ಕುತಂತ್ರ ಬುದ್ಧಿ ಕರ್ನಾಟಕ ಕಾಂಗ್ರೆಸ್  ಪಕ್ಷಕ್ಕೆ ಅಂಟಿಕೊಂಡಿರುವ ರೋಗ. ಅಲುಗಾಡುತ್ತಿರುವ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ "ಜಾತಿ ಗಣತಿ ವರದಿ"ಯ ಡ್ರಾಮಾ ಶುರು ಮಾಡಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದೆ. ಅಂದು ಭಾರತಕ್ಕೆ ಬಂದು ಬ್ರಿಟಿಷರು ಭಾರತೀಯರನ್ನು ಒಡೆದು ಆಳ್ವಿಕೆ ಮಾಡುತ್ತಿದ್ದರು. ಇಂದು ಇಟಲಿ ಕಾಂಗ್ರೆಸ್ ಪಕ್ಷದ ಗುಲಾಮರು ಅದನ್ನೇ ಮುಂದುವರಿಸಿದ್ದಾರೆ.

ವೈಜ್ಞಾನಿಕವಲ್ಲದ 10 ವರ್ಷಗಳ ಹಿಂದಿನ ಹಳಸಲು, ಕಾಟಾಚಾರದ ಸಮೀಕ್ಷೆಯನ್ನು ಜಾತಿ ಗಣತಿ ವರದಿಯಂದು ಬಿಂಬಿಸಿ, ಸಮುದಾಯಗಳ ಮಧ್ಯೆ "ದ್ವೇಷದ ವಿಷ ಬೀಜ" ಬಿತ್ತಲಾಗುತ್ತಿದೆ.

ರಾಜ್ಯದ ಜನಸಂಖ್ಯೆಗೂ ವರದಿಯ ಅಂಕಿ- ಅಂಶಗಳಿಗೂ ತಾಳಮೇಳವೇ ಇಲ್ಲ. ನನ್ನ ಮನೆಗೆ ಜಾತಿ ಗಣತಿ ಮಾಡುವವರು ಬಂದೇ ಇಲ್ಲ ಎಂದು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ನೀಡಿದ್ದ ಬಹಿರಂಗ ಹೇಳಿಕೆ ಇದಕ್ಕೆ ಸಾಕ್ಷಿ. ಇದು ಸಿದ್ದರಾಮಯ್ಯ ಅಂಡ್‌ ಟೀಂ ಸಿದ್ಧಪಡಿಸಿರುವ ರೆಡಿಮೇಡ್‌ ವರದಿ.

ದಶಕಗಳ ಹಿಂದಿನ ಈ ವರದಿಯಲ್ಲಿ ಹಲವು ನೂನ್ಯತೆಗಳಿವೆ, ಕ್ರಮಬದ್ಧವಾಗಿ ನಡೆದಿಲ್ಲ. ಮತ್ತು ಅಂಕಿ -ಅಂಶಗಳು ಅವಾಸ್ತವಿಕತೆಯಿಂದ ಕೂಡಿದೆ ಎಂದು ಸಂಪುಟದ ಸಚಿವರು ಮತ್ತು ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ಪ್ರಾಯೋಚಿತ "ಜಾತಿ ಗಣತಿ ವರದಿ" ರಾಜ್ಯದಲ್ಲಿ ಜಾತಿ ಜಾತಿಗಳ ನಡುವೆ ವೈಷಮ್ಯ ಸೃಷ್ಟಿಗೆ ಕಾರಣವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments