ಅಲುಗಾಡುತ್ತಿರುವ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಮಾಡುತ್ತಿರುವ ಡ್ರಾಮಾ: ಜೆಡಿಎಸ್‌

Sampriya
ಸೋಮವಾರ, 14 ಏಪ್ರಿಲ್ 2025 (17:24 IST)
Photo Credit X
ಬೆಂಗಳೂರು: ಒಡೆದು ಅಳುವ ಕುತಂತ್ರ ಬುದ್ಧಿ ಕರ್ನಾಟಕ ಕಾಂಗ್ರೆಸ್  ಪಕ್ಷಕ್ಕೆ ಅಂಟಿಕೊಂಡಿರುವ ರೋಗ. ಅಲುಗಾಡುತ್ತಿರುವ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ "ಜಾತಿ ಗಣತಿ ವರದಿ"ಯ ಡ್ರಾಮಾ ಶುರು ಮಾಡಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದೆ. ಅಂದು ಭಾರತಕ್ಕೆ ಬಂದು ಬ್ರಿಟಿಷರು ಭಾರತೀಯರನ್ನು ಒಡೆದು ಆಳ್ವಿಕೆ ಮಾಡುತ್ತಿದ್ದರು. ಇಂದು ಇಟಲಿ ಕಾಂಗ್ರೆಸ್ ಪಕ್ಷದ ಗುಲಾಮರು ಅದನ್ನೇ ಮುಂದುವರಿಸಿದ್ದಾರೆ.

ವೈಜ್ಞಾನಿಕವಲ್ಲದ 10 ವರ್ಷಗಳ ಹಿಂದಿನ ಹಳಸಲು, ಕಾಟಾಚಾರದ ಸಮೀಕ್ಷೆಯನ್ನು ಜಾತಿ ಗಣತಿ ವರದಿಯಂದು ಬಿಂಬಿಸಿ, ಸಮುದಾಯಗಳ ಮಧ್ಯೆ "ದ್ವೇಷದ ವಿಷ ಬೀಜ" ಬಿತ್ತಲಾಗುತ್ತಿದೆ.

ರಾಜ್ಯದ ಜನಸಂಖ್ಯೆಗೂ ವರದಿಯ ಅಂಕಿ- ಅಂಶಗಳಿಗೂ ತಾಳಮೇಳವೇ ಇಲ್ಲ. ನನ್ನ ಮನೆಗೆ ಜಾತಿ ಗಣತಿ ಮಾಡುವವರು ಬಂದೇ ಇಲ್ಲ ಎಂದು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ನೀಡಿದ್ದ ಬಹಿರಂಗ ಹೇಳಿಕೆ ಇದಕ್ಕೆ ಸಾಕ್ಷಿ. ಇದು ಸಿದ್ದರಾಮಯ್ಯ ಅಂಡ್‌ ಟೀಂ ಸಿದ್ಧಪಡಿಸಿರುವ ರೆಡಿಮೇಡ್‌ ವರದಿ.

ದಶಕಗಳ ಹಿಂದಿನ ಈ ವರದಿಯಲ್ಲಿ ಹಲವು ನೂನ್ಯತೆಗಳಿವೆ, ಕ್ರಮಬದ್ಧವಾಗಿ ನಡೆದಿಲ್ಲ. ಮತ್ತು ಅಂಕಿ -ಅಂಶಗಳು ಅವಾಸ್ತವಿಕತೆಯಿಂದ ಕೂಡಿದೆ ಎಂದು ಸಂಪುಟದ ಸಚಿವರು ಮತ್ತು ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ಪ್ರಾಯೋಚಿತ "ಜಾತಿ ಗಣತಿ ವರದಿ" ರಾಜ್ಯದಲ್ಲಿ ಜಾತಿ ಜಾತಿಗಳ ನಡುವೆ ವೈಷಮ್ಯ ಸೃಷ್ಟಿಗೆ ಕಾರಣವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments