Select Your Language

Notifications

webdunia
webdunia
webdunia
webdunia

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಇತರ ಸಚಿವರ ವಿರುದ್ಧ ಸಿದ್ದರಾಮಯ್ಯ ಫುಲ್‌ಗರಂ: ಯಾಕೆ ಗೊತ್ತಾ

Deputy Chief Minister DK Shivakumar, Chief Minister Siddaramaiah, Revenue Minister Krishna Bhairegowda

Sampriya

ಬೆಂಗಳೂರು , ಶನಿವಾರ, 31 ಮೇ 2025 (14:39 IST)
Photo Courtesy X
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ಸಚಿವರ ವಿರುದ್ಧ ಗರಂ ಆದ ಘಟನೆ ಶನಿವಾರ ನಡೆದಿದೆ. 

ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಎರಡನೇ ದಿನ ಸಿದ್ದರಾಮಯ್ಯ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಗೈರಾಗಿದ್ದ ಡಿ.ಕೆ.ಶಿವಕುಮಾರ್‌ ಮತ್ತು ಇತರ ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿದರು.

ಸಭೆ ಪ್ರಾರಂಭಕ್ಕೂ ಮುನ್ನ ಅಧಿಕಾರಿಗಳು ಸಚಿವರನ್ನ ಸ್ವಾಗತ ಮಾಡುತ್ತಿದ್ದರು. ಈ ವೇಳೆ ಹಲವು ಸಚಿವರು ಸಭೆಗೆ ಇನ್ನು ಆಗಮಿಸಿರಲಿಲ್ಲ. ಇದಕ್ಕೆ ಸಿಟ್ಟಾದ ಸಿಎಂ, ಯಾರ‍್ಯಾರು ಸಭೆಗೆ ಬಂದಿಲ್ಲವೋ ಅವರ ಹೆಸರು ಗುರುತು ಹಾಕಿಕೊಳ್ಳುತ್ತೇನೆ ಎಂದು ಕಿಡಿಕಾರಿದರು.

ಇದಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡರು ನೀವೇನು ದಂಡ ಹಾಕೋದಿಲ್ಲ ಅಲ್ವಾ, ಬಿಡಿ ಸರ್ ಎಂದು ಹೇಳಿದರು.  ಇದಕ್ಕೆ ಮತ್ತೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಇದು ಮುಖ್ಯವಾದ ಮೀಟಿಂಗ್ ಅಲ್ವಾ? ಎಲ್ಲರೂ ಸರಿಯಾದ ಸಮಯಕ್ಕೆ ಬರಬೇಕು. ಸಭೆಗೆ ಬಾರದೇ ಹೋದ್ರೆ ಹೇಗೆ? ಎಂದು ಪ್ರಶ್ನಿಸಿದರು. 

ಸಿದ್ದರಾಮಯ್ಯ ಅವರು ತಮ್ಮ ಪಕ್ಕದಲ್ಲೇ ಇದ್ದ ಖಾಲಿ ಕುರ್ಚಿಯ ಕಡೆ ಕೈ ತೋರಿಸಿ, ನಮ್ಮ ಡಿಸಿಎಂ ಅವರು ಇನ್ನೂ ಸಭೆಗೆ ಬಂದಿಲ್ಲ ಎಂದು ಡಿ.ಕೆ ಶಿವಕುಮಾರ್ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಘಟನೆಯೂ ನಡೆಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ಚಳಿಬಿಡಿಸಿದ ಲೋಕಾಯುಕ್ತ ಪೊಲೀಸರು: ಏಳು ಭ್ರಷ್ಟ ತಿಮಿಂಗಿಲಗಳಿಗೆ ಶಾಕ್‌